ಊಟ ವಿಚಾರದಲ್ಲಿ ಜಗಳ; ಪತ್ನಿ ಆತ್ಮಹತ್ಯೆ

ಬೆಂಗಳೂರು, ಸೆ.21 ಊಟದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ಇದರಿಂದ ನೊಂದ ಪತ್ನಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿಜೆ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಾಂಪುರದ ನಿವಾಸಿ ನಾಗರಾಜ ಎಂಬುವವರ ಪತ್ನಿ ಜಯಲಕ್ಷ್ಮಿ (31) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
10 ವರ್ಷದ ಹಿಂದೆ ನಾಗರಾಜ ಅವರನ್ನು ವಿವಾಹವಾಗಿದ್ದ ಜಯಲಕ್ಷ್ಮಿ ಶಾಂಪುರದಲ್ಲಿ ವಾಸವಾಗಿದ್ದರು. ಊಟದ ವಿಚಾರವಾಗಿ ದಂಪತಿ ನಡುವೆ ಜಗಳವಾಗಿದೆ. ಇದರಿಂದ ಕೋಪಗೊಂಡ ಜಯಲಕ್ಷ್ಮಿ ಅವರು ನಿನ್ನೆ ಸಂಜೆ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ.

ಬೆಂಕಿಯಿಂದಾಗಿ ಚೀರಾಡುತ್ತಿದ್ದ ಜಯಲಕ್ಷ್ಮಿ ಅವರನ್ನು ನೆರೆಹೊರೆಯವರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶವವನ್ನು ಅಂಬೇಡ್ಕರ್ ಆಸ್ಪತ್ರೆಯಲ್ಲಿಡಲಾಗಿದೆ. ನನ್ನ ಮಗಳ ಸಾವಿಗೆ ಅಳಿಯ ಕಿರುಕುಳ ನೀಡುತ್ತಿದ್ದುದೇ ಕಾರಣ ಎಂದು ಜಯಲಕ್ಷ್ಮಿ ಅವರ ತಾಯಿ ಡಿಜೆ ಹಳ್ಳಿ ಪೆÇಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ