ಕೆಎಎಸ್ ಅಧಿಕಾರಿಗಳ ಸಂಘದ ಕಾರ್ಯಕಾರಿ ಸಮಿತಿಗೆ ಸದಸ್ಯರ ಅವಿರೋಧ ಆಯ್ಕೆ

Varta Mitra News

ಬೆಂಗಳೂರು,ಸೆ.25-ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಕಾರ್ಯಕಾರಿ ಸಮಿತಿಗೆ 23 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಎನ್.ಮಹೇಶ್‍ಬಾಬು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 23 ರಂದು ನಡೆದ 2017-18ನೇ ಸಾಲಿನ ಕೆಎಎಸ್ ಅಧಿಕಾರಿಗಳ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಚುನಾವಣೆಯಲ್ಲಿ ಕಾರ್ಯಕಾರಿ ಸಮಿತಿಗೆ 23 ಸದಸ್ಯರನ್ನು ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಅಧ್ಯಕ್ಷರಾಗಿ ಜಯವಿಭವ್‍ಸ್ವಾಮಿ, ಉಪಾಧ್ಯಕ್ಷರಾಗಿ ಬಿ.ಶಿವಸ್ವಾಮಿ, ಕಾರ್ಯದರ್ಶಿ ಎನ್.ಮಹೇಶ್‍ಬಾಬು, ಕೆಎಎಸ್ ಜಂಟಿ ಕಾರ್ಯದರ್ಶಿಯಾಗಿ ಡಾ.ಎನ್.ಸಿ.ವೆಂಕಟರಾಜು, ಖಜಾಂಚಿಯಾಗಿ ಬಿ.ಆರ್.ಹರೀಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ