ಬಳ್ಳಾರಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ: ಶಾಸಕ ಪಿ.ಟಿ.ಪರಮೇಶ್ವರ್ ನಾಯಕ್

ಬೆಂಗಳೂರು, ಸೆ.25- ಸಾಮಾಜಿಕ ನ್ಯಾಯದಡಿ ಸಚಿವ ಸ್ಥಾನ ಕೊಡಲಿ. ಬಳ್ಳಾರಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಶಾಸಕ ಪಿ.ಟಿ.ಪರಮೇಶ್ವರ್ ನಾಯಕ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಆರು ಜನ ಶಾಸಕರಿದ್ದೇವೆ.ಹೀಗಾಗಿ ಬಳ್ಳಾರಿಗೆ ಒಂದು ಸಚಿವ ಸ್ಥಾನ ಕೊಡಬೇಕು. ಯಾರಿಗೆ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅದನ್ನು ನಾನು ಸ್ವಾಗತಿಸುತ್ತೇನೆ. ಸಾಮಾಜಿಕ ನ್ಯಾಯ ಅನುಸರಿಸಿ ಸಚಿವ ಸ್ಥಾನ ನೀಡಲಿ ಎಂಬುದು ನಮ್ಮ ಆಗ್ರಹ. ಯಾರಿಗೆ ಕೊಟ್ಟರೂ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು. ನಮ್ಮ ಜಿಲ್ಲೆಗೆ ಸಚಿವ ಸ್ಥಾನ ಕೊಡಿ ಎಂದು ಕೇಳುವುದರಲ್ಲಿ ತಪ್ಪೇನಿಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದನ್ನು ನಾವು ಸ್ವಾಗತಿಸುವುದಾಗಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ