ಶಬರಿಮಲೆ ಪ್ರವೇಶಕ್ಕೆ ಅವಕಾಶ; ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್​ ನ್ಯಾಯ ನೀಡಿದೆ: ಸಚಿವೆ ಜಯಮಾಲ

ಬೆಂಗಳೂರು: ಕೇಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವುದರ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ. ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ದೊರೆತ ಹಿನ್ನೆಲೆ ಸಚಿವೆ ಜಯಮಾಲ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್​ನಿಂದ ಬಂದ ತೀರ್ಪು ಸ್ವಾಗತಾರ್ಹವಾಗಿದ್ದು, ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್​ ನ್ಯಾಯ ನೀಡಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ನಾನು ಸ್ಮರಿಸುತ್ತಿದ್ದೇನೆ. ಮಹಿಳೆಯರಿಗೆ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ ಎಂದರು.
ಇನ್ನು ಈ ಬಾರಿ ಮಹಿಳಾ ಸಮುದಾಯಕ್ಕೆ ನ್ಯಾಯ ಒದಗಿಸಿಕೊಟ್ಟಿದ್ದಾರೆ. ಇಲ್ಲಿ ಬಂದಿರುವ ಪಕ್ಷದ ಎಲ್ಲ ನಾಯಕರಿಗೂ, ಮುಖಂಡರಿಗೂ ಸದಸ್ಯರಿಗೂ ಧನ್ಯವಾದಗಳು ಎಂದು ಹೇಳಿದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ