ಪ್ರಚೋದನಾಕಾರಿ ಭಾಷಣ: ಚುನಾಯಿತ ಪ್ರತಿನಿಧಿಗಳ ನ್ಯಾಯಾಲಯದಿಂದ ಕೆ.ಎಸ್.ಈಶ್ವರಪ್ಪ ಖುಲಾಸೆ

ಬೆಂಗಳೂರು, ಸೆ.29-ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳ ನ್ಯಾಯಾಲಯದಿಂದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಲಾಗಿದೆ.
2013ರಲ್ಲಿ ಶಿವಮೊಗ್ಗದಲ್ಲಿ ಈಶ್ವರಪ್ಪ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ