ನಾಳೆ ಗಾಂಧಿಗ್ರಾಮ ಪುರಸ್ಕಾರ ಪ್ರದಾನ

ಬೆಂಗಳೂರು,ಅ.1-ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪ್ರಸಕ್ತ ಸಾಲಿನ ಗಾಂಧಿಗ್ರಾಮ ಪುರಸ್ಕಾರ ಪ್ರದಾನ ಸಮಾರಂಭ ನಾಳೆ ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದೆ.
ಗಾಂಧಿಗ್ರಾಮ ಪುರಸ್ಕಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರದಾನ ಮಾಡಲಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಮರಣಿಕೆ ವಿತರಣೆ ಮಾಡುವರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೆರೇಗೌಡ ಶಾಸಕ ಆರ್.ರೋಷನ್ ಬೇಗ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ನಿರ್ಮಲಾ ಸೀತರಾಮನ್, ರಮೇಶ್ ಜಿಗಜಿಣಗಿ, ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಎಸ್.ಹೊರಟಿ, ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್, ಸಚಿವರಾದ ಕೆ.ಜೆ.ಜಾರ್ಜ್ ಜಮೀರ್ ಅಹಮ್ಮದ್ ಖಾನ್, ಡಾ.ಜಯಮಾಲ ರಾಮಚಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂಸದರಾದ ಪಿ.ಸಿ.ಮೋಹನ್, ರಾಜೀವ್ ಚಂದ್ರಶೇಖರ್, ಬಿ.ಕೆ.ಹರಿಪ್ರಸಾದ್, ಕೆ.ಸಿ.ರಾಮಮೂರ್ತಿ, ಎಲ್.ಹನುಮಂತಯ್ಯ, ಶಾಸಕರಾದ ರಾಮಲಿಂಗರೆಡ್ಡಿ, ಅರವಿಂದ ಲಿಂಬಾವಳಿ,ಎನ್.ಎ.ಹ್ಯಾರೀಸ್, ವಿ.ಸೋಮಣ್ಣ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರರು ಭಾಗವಹಿಸುವರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ