ರಾಮ ಮಂದಿರಕ್ಕಾಗಿ ಉಪವಾಸ ಸತ್ಯಾಗ್ರಹ ಅರಂಭಿಸಿದ ಸ್ವಾಮೀಜಿಗಳು

ಅಯೋಧ್ಯೆ: ರಾಮ ಮಂದಿರ ನಿರ್ಮಿಸುವಂತೆ ಒತ್ತಾಯಿಸಿ ಹಿಂದೂ ಸ್ವಾಮೀಜಿಗಳ ಗುಂಪೊಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದೆ.

ಅಕ್ಟೋಬರ್ 29 ರಿಂದ ಸುಪ್ರೀಂಕೋರ್ಟ್ ನಲ್ಲಿ ರಾಮ ಜನ್ಮ ಭೂಮಿ- ಬಾಬ್ರಿ ಮಸೀದಿಗೆ ಸಂಬಂಧಿಸಿದ ವಿಚಾರಣೆ ಆರಂಭವಾಗಲಿದ್ದು, ಈ ನಡುವೆ ಇಂದಿನಿಂದ ಕೆಲ ಸ್ವಾಮೀಜಿಗಳ ಗುಂಪು ಉಪವಾಸ ಸತ್ಯಾಗ್ರಹ ಆರಂಭಿಸಿವೆ.

ತಪಸ್ವಿ ಚಾವ್ನಿ ದೇವಾಲಯದಲ್ಲಿ ಸ್ವಾಮೀಜಿಗಳು ಶೈಲಾ ಪೂಜೆ ನೆರವೇರಿಸುವ ಮೂಲಕ ಸತ್ಯಾಗ್ರಹ ಆರಂಭಿಸಿದ್ದು, ಈ ವೇಳೆ ಮಾತನಾಡಿದ ದೇವಾಲಯದ ಮಹಂತ ಸ್ವಾಮಿ ಪರಮಹಂಸ ದಾಸ್, ರಾಮ ಮಂದಿರ ನಿರ್ಮಾಣ ಸಂಬಂಧ ಬಿಜೆಪಿ ಸರ್ಕಾರ ಕಾನೂನು ರೂಪಿಸಬೇಕು. ಆದಷ್ಟು ಬೇಗ ರಾಮಮಂದಿರ ನಿರ್ಮಾಣ ಆಗಬೇಕು. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಾತನಾಡಿ ಮಂದಿರ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿರುವುದಾಗಿ ತಿಳಿಸಿದರು.

ಸ್ವಾಮೀಜಿಗಳ ಮುಖ್ಯಸ್ಥ ಅಚಾರ್ಯ ಸತ್ಯೇಂದ್ರ ದಾಸ್, ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ವಿಫಲತೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು.

ಈ ಮಧ್ಯೆ ಅಯೋಧ್ಯ ವಿಚಾರ ಆದಷ್ಟು ಬೇಗ ಇತ್ಯರ್ಥವಾಗಲಿದೆ. ಈ ವಿವಾದದ ಇತ್ಯರ್ಥಕ್ಕಾಗಿ ದೇಶದ ಜನತೆಯೂ ಕಾಯುತ್ತಿದ್ದಾರೆ. ಸುಪ್ರೀಂಕೋರ್ಟ್ ರಾಮ ಮಂದಿರ ನಿರ್ಮಾಣ ಪರ ತೀರ್ಪು ನೀಡುವ ವಿಶ್ವಾಸವಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ