ಕುವೆಂಪು ಉದ್ಯಾನದಲ್ಲಿ ಸ್ವಚ್ಛತಾ ಅಭಿಯಾನ

ಬೆಂಗಳೂರು: ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ಕುವೆಂಪು ಉದ್ಯಾನದಲ್ಲಿ ಸ್ವಚ್ಛತಾ ಅಭಿಯಾನ ಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಮಾಜೀ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಕುವೆಂಪು ಪುತ್ಥಳಿ ಸ್ವಚ್ಛಗೊಳಿಸಿದರಲ್ಲದೇ ಸ್ಥಳೀಯರಿಗೆ ಘನ ತ್ಯಾಜ್ಯ ನಿರ್ವಹಣೆ ಜಾಗೃತಿ ಮೂಡಿಸುವ ಪುಸ್ತಕ ವಿತರಿಸಿದರು.

ಈ ವೇಳೆ ಮಾಜೀ ಉಪಮುಖ್ಯಮಂತ್ರಿ ಆರ್ ಅಶೋಕ್,ಹಿರಿಯ ನಾಯಕರಾದ ಗೋವಿಂದ ಕಾರಜೋಳ, ಸಂಸದ ಪಿ.ಸಿ.ಮೋಹನ್ ಮತ್ತು ಹಲವು ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

ಮನೆಗಳಿಗೆ ತೆರಳಿ ಕಸದ ಬುಟ್ಟಿಗಳನ್ನು ವಿತರಿಸಿದರಲ್ಲದೇ ಕಸ ಎತ್ತಿದರು. ಇದೇ ಸಂದರ್ಭದಲ್ಲಿ ಅವರು ಪೌರ ಕಾರ್ಮಿಕರನ್ನು ಮಾತನಾಡಿಸಿ ಅವರ ಸಮಸ್ಯೆ ಗಳನ್ನು ಆಲಿಸಿದರು.

ತಾರಾ, ನಟ ಶಿವರಾಂ,ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ,ಸ್ಥಳೀಯ ಕಾರ್ಪೋರೇಟರ್ ಗಳು ,ಅಪಾರ ಸಂಖ್ಯೆಯ ಕಾರ್ಯ ಕರ್ತರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ