ಮಹಾತ್ಮಾ ಗಾಂಧಿ ಕುರಿತ ಅಪರೂಪದ ಛಾಯಾಚಿತ್ರ ಪ್ರದರ್ಶನ

ಬೆಂಗಳೂರು: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯ, ಬೆಂಗಳೂರಿನ ಗಾಂಧೀ ಭವನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಅಕ್ಟೋಬರ್ 2 ರಿಂದ 4 ರ ವರೆಗೆ)_ ಮಹಾತ್ಮಾ ಗಾಂಧಿ ಅವರ ‘ 150ನೆಯ ಜನ್ಮ ವರ್ಷಾಚರಣೆ ’ ಪ್ರಯುಕ್ತ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿದೆ.

ಛಾಯಾಚಿತ್ರ ಪ್ರದರ್ಶನವನ್ನು ಮುಖ್ಯಮಂತ್ರಿ . ಹೆಚ್. ಡಿ ಕುಮಾರಸ್ವಾಮಿ ಉದ್ಘಾಟಿಸಿದರು.

ಮೂರು ದಿನಗಳ ಕಾಲ ನಡೆಯಲಿರುವ ಛಾಯಾಚಿತ್ರ ಪ್ರದರ್ಶನದಲ್ಲಿ ಮಹಾತ್ಮಾ ಗಾಂಧಿ ಅವರ ಜೀವನ ಹಾಗೂ ಸಾಧನೆ ಕುರಿತ ಅಪರೂಪದ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಪ್ರದರ್ಶನ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗಾಗಿ ಉಚಿತವಾಗಿ ತೆರೆದಿರುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ