ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿ 25 ಗ್ರಾಂ ಸರವನ್ನು ಕಿತ್ತುಕೊಂಡು ಪರಾರಿ

ಬೆಂಗಳೂರು, ಅ.5-ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ಆಕೆಯ ಕತ್ತಿನಲ್ಲಿದ್ದ 25 ಗ್ರಾಂ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಸುಮಾಭಟ್ ಸರ ಕಳೆದುಕೊಂಡವರು .

ನಿನ್ನೆ ಸಂಜೆ 6.45ರ ಸಮಯದಲ್ಲಿ ಕತ್ರಿಗುಪ್ಪೆ ಈಸ್ಟ್, 6ನೇ ಮೈನ್, 6ನೇ ಕ್ರಾಸ್‍ನಲ್ಲಿ ಕುಸುಮಾ ಭಟ್ ನಡೆದು ಹೋಗುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ಅವರ ಕೊರಳಿನಲ್ಲಿದ್ದ 25 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಸಿ.ಕೆ.ಅಚ್ಚುಕಟ್ಟು ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ