ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು: ಶಾಸಕ ಎಸ್.ರಾಮಪ್ಪ ಲಾಭಿ

ಬೆಂಗಳೂರು,ಅ.5- ತಾವು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಮಗಿಂತಲೂ ಹಿರಿಯರಾದ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹರಿಹರ ಕ್ಷೇತ್ರದ ಶಾಸಕ ಎಸ್.ರಾಮಪ್ಪ ಲಾಭಿ ನಡೆಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ನಿಗಮಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಾಕು. ಜಿಲ್ಲೆಗೆ ಸಚಿವ ಸ್ಥಾನ ನೀಡುವುದಾದರೆ ಶ್ಯಾಮನೂರು ಶಿವಶಂಕರಪ್ಪನವರಿಗೆ ನೀಡಬೇಕೆಂದು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದ್ದಾರೆ.

ಆಪರೇಷನ್ ಕಮಲ ನಡೆಯುತ್ತಿರುವುದು ನಿಜ. ಬಿಜೆಪಿಯ ಕೆಲ ನಾಯಕರು ತಮಗೂ ಕರೆ ಮಾಡಿ ಆಮಿಷವೊಡ್ಡಿದ್ದರು. ಯಾರೂ ಕರೆ ಮಾಡಿದ್ದರೂ ಎಂಬುದನ್ನು ಬಹಿರಂಗಪಡಿಸುವುದಿಲ್ಲ. ಆದರೆ ತಾವು ಇಂಥ ಆಮಿಷಗಳಿಗೆ ಬಲಿಯಾಗುವುದಿಲ್ಲ. ಕಾಂಗ್ರೆಸ್ ಬಿಟ್ಟು ಬೇರೆ ಎಲ್ಲೂ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ