ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂದ ಸಚಿವ ಜಮೀರ್ ಅಹಮ್ಮದ್

ಬೆಂಗಳೂರು, ಅ.7-ಜನಮೆಚ್ಚಿದ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿಯಾಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಂತಹ ನಾಯಕ ದೇಶದಲ್ಲೇ ಮತ್ತೊಬ್ಬರು ಸಿಗುವುದಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಮರ ಅಭಿವೃದ್ಧಿಗೆ 3100 ಕೋಟಿ ರೂ. ಗಳ ಅನುದಾನ ನೀಡಿದ್ದಾರೆ. ಈಗ ಅವರೇ ಸಿಎಂ ಆಗಿದ್ದರೆ 10 ಸಾವಿರ ಕೋಟಿ ಕೊಡುತ್ತಿದ್ದರು. ರಾಜ್ಯದುದ್ದಕ್ಕೂ ಯಾವುದೇ ಮೂಲೆಗೆ ಹೋದರೂ ಅಲ್ಪಸಂಖ್ಯಾತರು ಸಿದ್ದರಾಮಯ್ಯ ಅವರನ್ನು ಸ್ಮರಿಸುತ್ತಾರೆ. ನಾಯಕ ಎಂದರೆ ಸಿದ್ದರಾಮಯ್ಯ ಅವರಂತಿರಬೇಕು. ಅಲ್ಪಸಂಖ್ಯಾತರ ಬಗ್ಗೆ ಅವರಿಗಿರುವ ಕಾಳಜಿ ಅಪಾರ ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರ 5 ವರ್ಷ ಅವಧಿ ಪೂರೈಸಲಿದೆ. ಈ ಅವಧಿ ಪೂರ್ತಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿರಲು ಹೈಕಮಾಂಡ್ ಒಪ್ಪಿದೆ. ಅದರಂತೆಯೇ ನಡೆಯಲಿದೆ. ಮುಂದಿನ ಬಾರಿಗೆ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು. ಇದು ನನ್ನೊಬ್ಬನ ಅಭಿಪ್ರಾಯವಲ್ಲ, ಜನರ ಮನದ ಮಾತು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ