ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆ ಪತ್ರ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು

ಬೆಂಗಳೂರು, ಅ.15-ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನಕ್ಕೆ ಎನ್.ಮಹೇಶ್ ನೀಡಿರುವ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ.

ಕಳೆದ ಗುರುವಾರ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಸಲ್ಲಿಸಿದ್ದರು. ಇಂದು ಮಹೇಶ್ ಅವರ ಸಚಿವ ಸ್ಥಾನ ರಾಜೀನಾಮೆ ಪತ್ರ ಅಂಗೀಕರಿಸುವಂತೆ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ಖಚಿತ ಪಡಿಸಿದ ಮುಖ್ಯಮಂತ್ರಿಗಳು, ಮಹೇಶ್ ಅವರ ರಾಜೀನಾಮೆಗೂ, ಜೆಡಿಎಸ್, ಬಿಎಸ್‍ಪಿ ಮೈತ್ರಿಗೂ ಸಂಬಂಧವಿಲ್ಲ. ಮೈತ್ರಿ ಮುಂದುವರೆಯಲಿದೆ. ಬಿಎಸ್‍ಪಿ ಮುಖಂಡರ ಮನವಿ ಮೇರೆಗೆ ರಾಜೀನಾಮೆ ಪತ್ರ ಅಂಗೀಕರಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ ಎಂದರು.

ಮಹೇಶ್ ಅವರು ರಾಜೀನಾಮೆ ನೀಡಿರುವುದು ಅವರ ಪಕ್ಷದ ಆಂತರಿಕ ವಿಚಾರದಿಂದ. ಆ ಪಕ್ಷದ ವರಿಷ್ಠರ ನಿರ್ದೇಶನದಂತೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ