ಅನಾರೋಗ್ಯದಿಂದ ಬಳಲುತ್ತಿದ್ದ ಕೋರಿಯರ್ ಕಂಪನಿಯ ನೌಕರ ಆತ್ಮಹತ್ಯೆ

Execution Sling Hanging Hangman Knot Penalty Rope

ಬೆಂಗಳೂರು, ಅ.18- ಅನಾರೋಗ್ಯದಿಂದ ನೊಂದಿದ್ದ ಕೊರಿಯರ್ ಕಂಪೆನಿ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಗೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ ಮೂಲದ ಶರತ್ (23) ಆತ್ಮಹತ್ಯೆ ಮಾಡಿಕೊಂಡವ.
ವಿವಾಹಿತನಾದ ಈತ ಚಿಕ್ಕಬೇಗೂರಿನ ಪಬ್ಲಿಕ್ ಶಾಲೆ ಹಿಂಭಾಗದ ಮನೆಯಲ್ಲಿ ವಾಸವಾಗಿದ್ದನು. ಕೊರಿಯರ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಆರೋಗ್ಯ ಸರಿಯಿರಲಿಲ್ಲ ಎನ್ನಲಾಗಿದೆ.
ಇದರಿಂದ ನೊಂದಿದ್ದ ಶರತ್ ನಿನ್ನೆ ರಾತ್ರಿ 7- 7.45ರ ಮಧ್ಯೆ ವೇಲ್‍ನಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುದ್ದಿ ತಿಳಿದ ಬೇಗೂರು ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಸೆಂಟ್‍ಜಾನ್ ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ