ತೋಂಟದಾರ್ಯ ಶ್ರೀ ನಿಧನಕ್ಕೆ ಆದಿಚುಂಚನಗಿರಿ ಡಾ.ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಸಂತಾಪ

ಬೆಂಗಳೂರು, ಅ.20- ಗದುಗಿನ ಶ್ರೀ ತೋಂಟದಾರ್ಯ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಅವರ ನಿಧನಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕøತಿಕ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಸೇವೆಗಳ ಮೂಲಕ ನಾಡಿನ ಶ್ರೇಯೋಭಿವೃದ್ಧಿಗಾಗಿ ಶ್ರೀಗಳು ಶ್ರಮಿಸುತ್ತಿದ್ದರು. ತಮ್ಮ ಜೀವಿತಾವಧಿಯ ಸಂಪೂರ್ಣ ಸಮಯವನ್ನು ಸಮಾಜದ ಒಳಿತಿನ ದಿಸೆಯಲ್ಲಿ ತೊಡಗಿಸಿಕೊಂಡು ತಾವು ಕಂಡ ಕನಸನ್ನು ಸಾಕಾರಗೊಳಿಸುತ್ತಿದ್ದರು. ಇಂದು ಶ್ರೀಗಳು ನಮ್ಮೊಂದಿಗೆ ಇಲ್ಲವಾದದ್ದು ಅತ್ಯಂತ ವಿಷಾದನೀಯ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ