ಬೈಕ್‍ನಲ್ಲಿ ಇಬ್ಬರು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆÇಲೀಸ್ ಚೌಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವು

ಬೆಂಗಳೂರು, ಅ.21- ಬೈಕ್‍ನಲ್ಲಿ ಇಬ್ಬರು ಸವಾರರು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆÇಲೀಸ್ ಚೌಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಹೈಗ್ರೌಂಡ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿಂದು ಬೆಳಗಿನ ಜಾವ ಸಂಭವಿಸಿದೆ.

ತಮಿಳುನಾಡು ಮೂಲದ ಶರಣ್(23) ಮೃತಪಟ್ಟ ಬೈಕ್ ಸವಾರ. ಹೆಬ್ಬಾಳದಲ್ಲಿ ವಾಸವಾಗಿದ್ದ ಶರಣ್ ನಗರದಲ್ಲಿ ರೇಡಿಯಾಲಿಸ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಬೆಳಗಿನ ಜಾವ 1.45ರಲ್ಲಿ ಸ್ನೇಹಿತನನ್ನು ಬೈಕ್‍ನಲ್ಲಿ ಕೂರಿಸಿಕೊಂಡು ಶರಣ್ ಹೋಗುತ್ತಿದ್ದರು.

ಹೈಗ್ರೌಂಡ್ಸ್ ಸಂಚಾರಿ ಠಾಣೆ ವ್ಯಾಪ್ತಿಯ ವಿಂಡ್ಸರ್ ಮ್ಯಾನರ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆÇಲೀಸ್ ಚೌಕಿ (ಪೆÇಲೀಸ್ ಐಲ್ಯಾಂಡ್)ಗೆ ಅಪ್ಪಳಿಸಿದೆ. ಪರಿಣಾಮವಾಗಿ ಸವಾರ ಶರಣ್ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾನೆ.

ಹಿಂಬದಿ ಸವಾರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಈ ಸಂಬಂಧ ಹೈಗ್ರೌಂಡ್ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ