ರಾಜ್ಯದ ಪ್ರತಿ ಪ್ರಜೆಗೂ ಕಾನೂನಿನಲ್ಲಿ ರಕ್ಷಣೆ ನೀಡಬೇಕು: ಸಿಎಂ ಎಚ್.ಡಿ.ಕುಮಾರಸ್ವಾಮಿ ಸೂಚನೆ

ಬೆಂಗಳೂರು, ಅ.21- ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಜಾತಿ, ಧರ್ಮಗಳ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಇವರು ಸಂಚು ರೂಪಿಸುತ್ತಿದ್ದಾರೆ. ಇಂತಹ ಶಕ್ತಿಗಳನ್ನು ಪೆÇಲೀಸರು ಮಟ್ಟಹಾಕಿ ರಾಜ್ಯದ ಪ್ರತಿ ಪ್ರಜೆಗೂ ಕಾನೂನಿನಲ್ಲಿ ರಕ್ಷಣೆ ನೀಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಪೆÇಲೀಸ್ ಹುತಾತ್ಮ ದಿನಚಾರಣೆ ಅಂಗವಾಗಿ ನಗರದ ಕೋರಮಂಗಲದ ಕೆಎಸ್‍ಆರ್‍ಪಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮ ಪೆÇಲೀಸರಿಗೆ ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು, ಸ್ವಾರ್ಥ ಹಿತಾಸಕ್ತಿಗಾಗಿ ಕೆಲವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೆÇಲೀಸರು ಹಿಂಜರಿಯಬಾರದು. ಇದಕ್ಕೆ ನಮ್ಮ ಸರ್ಕಾರ ಮುಕ್ತ ಅವಕಾಶ ನೀಡುತ್ತದೆ. ನಿರ್ಭೀತಿಯಿಂದ ಇಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಿ ಎಂದು ಪೆÇಲೀಸರಿಗೆ ಅಭಯ ನೀಡಿದರು.

ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಪೆÇಲೀಸ್ ಇಲಾಖೆ ಅಧಿಕಾರಿಗಳು ದೇವರು ಎಂಬ ಭಾವನೆ ಸಾಮಾನ್ಯ ಜನರಲ್ಲಿ ಮೂಡಬೇಕು ಆ ರೀತಿಯಲ್ಲಿ ನೀವು ಕೆಲಸ ಮಾಡಬೇಕು. ಪೆÇಲೀಸರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ನಾಡನ್ನು ಕಾಯುವ ಕೆಲಸ ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು.

ದೇಶದಲ್ಲೇ ರಾಜ್ಯ ಪೆÇಲೀಸ್ ಕರ್ತವ್ಯನಿಷ್ಠೆ ಮತ್ತು ಪ್ರಾಮಾಣಿಕ ಸೇವೆಯಲ್ಲಿ ಹೆಸರುವಾಸಿಯಾಗಿದೆ. ನಮ್ಮ ಅಧಿಕಾರಿಗಳು ಅತ್ಯುತ್ತಮ ಕೆಲಸ ಮಾಡಿದ್ದಾರೆ. ನಾಡನ್ನು ರಕ್ಷಣೆ ಮಾಡುತ್ತಿರುವ ನಿಮಗೆ ರಾಜ್ಯದ ಪರವಾಗಿ ಗೌರವ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಪೆÇಲೀಸರ ಸಮಸ್ಯೆ ನಿವಾರಣೆಗೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಈ ಕುರಿತು ಸರ್ಕಾರಕ್ಕೆ ನೀಡಿರುವ ವರದಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ್ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.

ದೇಶಕ್ಕಾಗಿ ದುಡಿದು ಪ್ರಾಣ ತ್ಯಾಗ ಮಾಡಿದವರನ್ನು ಸ್ಮರಿಸುವ ಈ ದಿನದಂದು ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ಸರ್ಕಾರದ ಮೇಲೆ ಎಷ್ಟೇ ಹೊರೆ ಇದ್ದರೂ ನಿಮಗೆ ಸಹಕಾರಿಯಾಗುವಂತಹ ಕೆಲಸ ಮಾಡುತ್ತೇವೆ. ಈ ಕುರಿತು ಚರ್ಚೆ ನಡೆಯುತ್ತಿದೆ. ಆದಷ್ಟು ಬೇಗ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ನಾಡಿನಲ್ಲಿ ಯಾವುದೇ ಅಮಾನವೀಯ ಘಟನೆಗಳು ಸಂಭವಿಸದಂತೆ ಪೆÇಲೀಸರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ರಾಜಿಗೆ ಒಳಗಾಗದೇ ಮುಕ್ತವಾಗಿ ಕೆಲಸ ಮಾಡಬೇಕು. ಇನ್ನೂ ಹೆಚ್ಚಿನ ರೀತಿಯ ಕೆಲಸವನ್ನು ನಾವು ನಿಮ್ಮಿಂದ ಬಯಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
1959 ರಲ್ಲಿ ಭಾರತದ 10 ಪೆÇಲೀಸರನ್ನು ಚೀನಾ ಪಡೆ ಕೊಂದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಅಕ್ಟೋಬರ್ 21ರಂದು ಪೆÇಲೀಸ್ ಹುತಾತ್ಮರ ದಿನವನ್ನು ಆಚರಿಸುತ್ತಿದೆ.

ಕಾರ್ಯಕ್ರಮದಲ್ಲಿ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗೃಹ ಇಲಾಖೆಯ ಕಾರ್ಯದರ್ಶಿ ರಜನೀಶ್, ನಟ ಕಿಚ್ಚ ಸುದೀಪ್ , ರಾಜ್ಯ ಪೆÇಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು , ನಗರ ಪೆÇಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ , ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶಣೈ, ಸೇರಿದಂತೆ ಹಲವು ಪೆÇಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದ ಹುತಾತ್ಮ ಪೆÇಲೀಸರ ಕುಟುಂಬಸ್ಥರು, ನಿವೃತ್ತ ಪೆÇಲೀಸ್ ಅಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ