ಜಮೀನು ವಿವಾದ ಹಿನ್ನೆಲೆಯಲ್ಲಿ ದೂರು ನೀಡಿದರೂ ಸ್ವೀಕರಿಸದಿದ್ದರಿಂದ ನೊಂದು ವ್ಯಕ್ತಿ ವಿಷ ಕುಡಿದು ಆತ್ಮಹತ್ಯೆ

ಬೆಳಗಾವಿ, ಅ.21-ಜಮೀನು ವಿವಾದ ಹಿನ್ನೆಲೆಯಲ್ಲಿ ದೂರು ನೀಡಿದರೂ ಸ್ವೀಕರಿಸದಿದ್ದರಿಂದ ನೊಂದು ವ್ಯಕ್ತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ಪೆÇಲೀಸ್ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ರಾಯಭಾಗ ಪಟ್ಟಣದ ಸದಾಶಿವ ರಾಮ ಬಂತೆ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ರಾಯಭಾಗ ಗ್ರಾಮೀಣ ಭಾಗದ ಆನೆಬಾಯಿ ಕೋಡಿಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ರಾಯಭಾಗ ಪೆÇಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದಾಗ ಪೆÇಲೀಸರು ದೂರು ಸ್ವೀಕರಿಸದೆ ಇದ್ದ ಕಾರಣ ಮನನೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ