ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ವೈಮನಸ್ಯವಿಲ್ಲ: ಸಚಿವ ಜಿ.ಟಿ.ದೇವೇಗೌಡ

ಶಿವಮೊಗ್ಗ, ಅ.28- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ವೈಮನಸ್ಸಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಮಧುಬಂಗಾರಪ್ಪ ಅವರ ಪರವಾಗಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಬ್ಬರೂ ಒಂದಾಗಿದ್ದಾರೆ. ಅದೇ ರೀತಿ ನಾವೂ ಕೂಡ ಒಂದಾಗಿದ್ದೇವೆ. ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಈಶ್ವರಪ್ಪ ಮತ್ತು ಯಡಿಯೂರಪ್ಪ ಇಬ್ಬರು ಒಂದಾಗುತ್ತಾರೆಂದು ಯಾರೂ ಕೂಡ ಭಾವಿಸಿರಲಿಲ್ಲ. ಈಗ ಕಾಂಗ್ರೆಸ್‍ನೊಂದಿಗೆ ಜತೆಗೂಡಿ ಸರ್ಕಾರ ನಡೆಸಲಾಗುತ್ತಿದೆ. ಉಪ ಚುನಾವಣೆಯಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡು ಒಮ್ಮತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಪರಿಸ್ಥಿತಿ ಹೀಗಿರುವಾಗ ನಮ್ಮಿಬ್ಬರ ನಡುವೆ ವೈಷಮ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.
ಆದರೂ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ತಾವೇ ಸೋಲಿಸಿದ್ದು ಎಂದು ಪದೇ ಪದೇ ಪ್ರಚಾರ ಮಾಡುವುದು ಸರಿಯಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ