ರಾಮ ಮಂದಿರ ನಿರ್ಮಾಣ ನಮ್ಮ ಪಕ್ಷದ ಅಜೆಂಡಾ ಅಲ್ಲ; ಸುಪ್ರೀಂ ತೀರ್ಪಿಗೆ ಬದ್ಧ: ಜೆಡಿಯು

ಪಾಟ್ನಾ: ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಿತ್ರ ಪಕ್ಷ ಸಂಯುಕ್ತ ಜನತಾದಳ ( ಜೆಡಿಯಷದ ಅಜೆಂಡಾ ಅಲ್ಲ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರುತ್ತೇವೆ ಎಂದುತಿಳಿಸಿದೆ.

ಈ ಕುರಿತು ಮಾತನಾಡಿರುವ ಜೆಡಿಯು ವಕ್ತಾರ, ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರ ಆಪ್ತ ಬಳಗದ ಮುಖಂಡ ಸಂಜಯ್​ ಸಿಂಗ್​, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಮ್ಮ ಪಕ್ಷದ ಅಜೆಂಡಾದಲ್ಲಿ ಇಲ್ಲ. ಸದ್ಯ ರಾಮ ಮಂದಿರ ನಿರ್ಮಿಸಬೇಕು ಎಂದು ಹೇಳಲಾಗುತ್ತಿರುವ ಜಾಗ ವಿವಾದಿತವಾಗಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರುತ್ತೇವೆ. ರಾಮ ಮಂದಿರಕ್ಕೆ ಸಂಬಂಧಿಸಿದಂತೆ ನಾವು ಯಾರನ್ನೂ ಬೆಂಬಲಿಸುವುದಿಲ್ಲ, ತಟಸ್ಥವಾಗಿರುವುದಾಗಿ ಹೇಳಿದ್ದಾರೆ

2019ರ ಜನವರಿಯಲ್ಲಿ ರಾಮಮಂದಿರ ವಿವಾದದ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್​ ಇಂದು ತಿಳಿಸಿದೆ. ಈ ನಿಟ್ಟಿನಲ್ಲಿ ರಾಮ ಮಂದಿರದ ವಿವಾದದಲ್ಲಿ ಬಿಜೆಪಿಯೊಂದಿಗೆ ತನ್ನದೇನೂ ಪಾತ್ರವಿಲ್ಲ ಎಂದು ಜೆಡಿಯು ಮತ್ತೊಮ್ಮೆ ಸ್ಪಷ್ಟಪಡಿಸಿದೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ