ಮೀಟೂ ಹಗರಣ ಸಂಬಂಧಪಟ್ಟಂತೆ ಖ್ಯಾತ ನಟ ಅರ್ಜುನ್ ಸರ್ಜಾ ವಿಚಾರಣೆ

ಬೆಂಗಳೂರು, ಅ.30- ನಟಿ ಶ್ರುತಿ ಹರಿಹರನ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಖ್ಯಾತ ನಟ ಅರ್ಜುನ್ ಸರ್ಜಾ ಇಂದು ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ವಿಚಾರಣೆಗೆ ಬರುವ ಅರ್ಜುನ್ ಅವರನ್ನು ಯಾವುದೇ ವಾರೆಂಟ್ ಇಲ್ಲದೆ ಪೆÇಲೀಸರು ಬಂಧಿಸಬಹುದು.ಸಾಕ್ಷ್ಯನಾಶ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಲಕ್ಷಣ ಕಂಡುಬಂದರೂ ಅವರನ್ನು ಬಂಧಿಸುವ ಅಧಿಕಾರ ತನಿಖಾಧಿಕಾರಿಗೆ ಇದೆ.

ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಆರೋಪಿಯಿಂದ ಲಿಖಿತ ಹೇಳಿಕೆ ಪಡೆದುಕೊಂಡು ಬಿಟ್ಟು ಕಳಿಸಲೂಬಹುದು
ಈ ಮಧ್ಯೆ ಇದೇ ಪ್ರಕರಣಕ್ಕೆ ಸಂಬಂಧಿಸಿ ಅರ್ಜುನ್ ಸರ್ಜಾ ವಿರುದ್ದ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸು ದಾಖಲಿಸಿದೆ
ಮಾಧ್ಯಮಗಳ ವರದಿಗಳನ್ನು ಆಧಾರವಾಗಿಟ್ಟುಕೊಂಡು ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಕೇಸು ದಾಖಲಿಸಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರ ಪೆÇಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಅವರಿಗೆ ಸೂಚಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರ ನೀಡಲು ಖುದ್ದು ಆಯೋಗದ ಮುಂದೆ ಹಾಜರಾಗಲು ನಾವು ಶ್ರುತಿ ಹರಿಹರನ್ ಗೆ ಹೇಳಿದ್ದೇವೆ. ಬಳಿಕ ನಾವು ನಟ ಅರ್ಜುನ್ ಸರ್ಜಾ ಅವರನ್ನು ಮುಂದಿನ ತನಿಖೆಗೆ ಕರೆಯುವುದಾಗಿ ನಾಗಲಕ್ಷ್ಮಿ ಬಾಯಿ ತಿಳಿಸಿದ್ದಾರೆ.
ಬೆಂಗಳೂರಿನ ಮೆಯೊ ಹಾಲ್ ಕೋರ್ಟ್‍ನಲ್ಲಿ ನಟ ಧ್ರುವ ಸರ್ಜಾ ಶ್ರುತಿ ಹರಿಹರನ್ ವಿರುದ್ಧ ಸಲ್ಲಿಸಿರುವ ದೂರಿಗೆ ಸಂಬಂಧಪಟ್ಟಂತೆ ಶ್ರುತಿ ಪರ ವಕೀಲ ಜಯಣ್ಣ ಕೊಠಾರಿ ಆಕ್ಷೇಪಾರ್ಹ ಅರ್ಜಿ ಸಲ್ಲಿಸಿದ್ದಾರೆ.

ನಟ ಅರ್ಜುನ್ ಅವರು ಸಮಾಜದಲ್ಲಿ ತಮ್ಮ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡು ನನ್ನ ಕಕ್ಷಿದಾರಳಾದ ಶ್ರುತಿ ಹರಿಹರನ್ ವಿರುದ್ಧ ಅನುಚಿತವಾಗಿ ವರ್ತಿಸಿದ್ದಾರೆ.ಅದನ್ನು ಶ್ರುತಿ ಅವರು ಮಿ-ಟೂ ಸಾಮಾಜಿಕ ಚಳವಳಿಯಡಿ ಹೇಳಿಕೊಂಡಿದ್ದರು.ಅದಕ್ಕಾಗಿ ಪ್ರತಿನಿತ್ಯ ಅವರಿಗೆ 500ಕ್ಕೂ ಹೆಚ್ಚು ಅನಾಮಧೇಯ ಬೆದರಿಕೆ ಕರೆಗಳು ಬರುತ್ತಿವೆ. ಇದರಿಂದ ಬೇಸತ್ತು ಶ್ರುತಿ ಅವರು ತಮ್ಮ ಮೊಬೈಲ್ ಸಂಖ್ಯೆಯನ್ನು ಕೂಡ ಬದಲಾಯಿಸಿಕೊಂಡಿದ್ದಾರೆ ಎಂದು ವಕೀಲರು ಆಕ್ಷೇಪಣೆಯಲ್ಲಿ ಹೇಳಿಕೊಂಡಿದ್ದಾರೆ.

ಶ್ರುತಿ ಮಾತ್ರವಲ್ಲದೆ ಅವರ ಕುಟುಂಬದವರಿಗೂ ಬೆದರಿಕೆಯಿದೆ.ಅದಕ್ಕಾಗಿ ಅವರು ತಮ್ಮ ತಾಯಿ ಮತ್ತು ಅಜ್ಜಿಯನ್ನು ಬೇರೆಡೆ ಕಳುಹಿಸಿದ್ದಾರೆ.ಇದಕ್ಕಾಗಿ ಶ್ರುತಿ ಪೆÇಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ