ಹೆಚ್ಚುವರಿ ಸಾಲ ನೀಡುವುದನ್ನು ತಡೆಯಲು ಆರ್ ಬಿಐ ವಿಫಲ: ಅರುಣ್ ಜೇಟ್ಲಿ ಟೀಕೆ
October 30, 2018VDವಾಣಿಜ್ಯComments Off on ಹೆಚ್ಚುವರಿ ಸಾಲ ನೀಡುವುದನ್ನು ತಡೆಯಲು ಆರ್ ಬಿಐ ವಿಫಲ: ಅರುಣ್ ಜೇಟ್ಲಿ ಟೀಕೆ
Seen By: 261
ನವದೆಹಲಿ: ಹೆಚ್ಚುವರಿ ಸಾಲವನ್ನು ನೀಡುವುದನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.2008ರಿಂದ 2014ರವರೆಗೆ ವಿವೇಚನೆಯಿಲ್ಲದೆ ಬ್ಯಾಂಕುಗಳು ಗ್ರಾಹಕರಿಗೆ ಸಾಲ ನೀಡುವಾಗ ರಿಸರ್ವ್ ಬ್ಯಾಂಕ್ ಅದಕ್ಕೆ ತಡೆಯೊಡ್ಡದೆ ಬೇರೆ ರೀತಿಯಲ್ಲಿ ನೋಡಿತು ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು.ಕೇಂದ್ರ ಬ್ಯಾಂಕಾದ ಆರ್ ಬಿಐಯ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದು ಸಂಭಾವ್ಯ ದುರಂತ ಎಂದು ಕಳೆದ ಶುಕ್ರವಾರ ಬ್ಯಾಂಕಿನ ಉಪ ಗವರ್ನರ್ ವಿರಾಲ್ ಆಚಾರ್ಯ ಭಾಷಣವೊಂದರಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಇದರಿಂದ ಆರ್ ಬಿಐ ಮತ್ತು ಹಣಕಾಸು ಸಚಿವಾಲಯದ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿದೆ.ತನ್ನ ನೀತಿಯನ್ನು ಸಡಿಲಗೊಳಿಸಿ ಅಧಿಕಾರವನ್ನು ಕುಂಠಿತಗೊಳಿಸುವ ಕೇಂದ್ರ ಸರ್ಕಾರದ ಒತ್ತಡಕ್ಕೆ ಆರ್ ಬಿಐಯ ವಿರೋಧವಿದೆ ಎಂಬುದನ್ನು ವಿರಾಲ್ ಆಚಾರ್ಯರ ಮಾತು ಸೂಚಿಸುತ್ತದೆ.
Seen By: 220 ಮುಂಬೈ: ಭಾರತೀಯ ರೂಪಾಯಿ ಕುಸಿತವನ್ನು ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಾಟ್ ಮಾರ್ಕೆಟ್(ಈಗಲೇ ಒಪ್ಪಂದ ಮಾಡಿಕೊಂಡು ಈಗಲೇ ವಹಿವಾಟು ನಡೆಸುವುದು) ಮತ್ತು [more]
November 9, 2018VDವಾಣಿಜ್ಯComments Off on ಆರ್ಬಿಐ ಮೀಸಲು ನಿಧಿಯಿಂದ 3.6 ಲಕ್ಷ ಕೋಟಿ ರೂ. ಕೇಳಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ
Seen By: 189 ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮೀಸಲು ನಿಧಿಯಿಂದ 3.6 ಲಕ್ಷ ಕೋಟಿ ರೂ. ಹಣವನ್ನು ಪಡೆಯುವ ನಿರೀಕ್ಷೆಯಲ್ಲಿ ಇಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ [more]