ಕ್ರಿಮಿನಲ್ ಪ್ರಕರಣ ಸಂಬಂಧ ಸತತ ಗೈರು ಹಾಜರು ಹಿನ್ನಲೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪಗೆ ಜಾಮೀನು ರಹಿತ ವಾರೆಂಟ್

ಬೆಂಗಳೂರು, ಅ.30- ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿ ಸತತ ಗೈರು ಹಾಜರಾದ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಇಲ್ಲಿನ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಅದೇಶಿಸಿದೆ.

2011ರಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಕಳೆದುಕೊಂಡಾಗ ಈಶ್ವರಪ್ಪ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದರು.ಇದನ್ನು ಪ್ರಶ್ನಿಸಿ ಹೈಕೋರ್ಟ್ ವಕೀಲ ಧರ್ಮಪಾಲ್ ಅವರು ಖಾಸಗಿ ದೂರು ಸಲ್ಲಿಸಿದ್ದರು.

ನಗರದ ಸಿಟಿ ಸಿವಿಲ್ ಕೋರ್ಟ್ ವಿಶೇಷ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಆದೇಶಿಸಲಾಗಿದೆ.ನವೆಂಬರ್ 24ಕ್ಕೆ ವಿಚಾರಣೆಗೆ ಕೋರ್ಟ್‍ಗೆ ಖುದ್ದು ಹಾಜರಾಗಲು ಆದೇಶಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ