ಕನ್ನಡಿಗರಿಗೆ ಹಾಗೂ ಸಿಎಂ ಕುಮಾರಸ್ವಾಮಿಯವರಿಗೆ ರಾಜ್ಯೋತ್ಸವ ಶುಭಶಯ ಕೋರಿದ ಟಾಲಿವುಡ್​ ನಟ ಪವನ್ ಕಲ್ಯಾಣ್

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಟಾಲಿವುಡ್​ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡಿಗರಿಗೆ ಟ್ವಿಟರ್​ ಮೂಲಕ ಶುಭ ಕೋರಿದ್ದಾರೆ.

63ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್​ ಮಾಡಿರುವ ಪವನ್​ ಕಲ್ಯಾಣ್​ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂಬ ಘೋಷಣೆ ಕೂಗಿದ್ದಾರೆ.

ನನ್ನ ಪ್ರೀತಿಯ ಹಾಗೂ ಗೌರವಾನ್ವಿತ ಸಹೋದರ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ಎಲ್ಲ ದಿಕ್ಕುಗಳಲ್ಲಿ ವೇಗವಾಗಿ ಅಭಿವೃದ್ಧಿಯನ್ನು ಹೊಂದುತ್ತಿದೆ ಎಂಬುದನ್ನು ನಾನು ನಂಬಿದ್ದೇನೆ ಎಂದು ಪವನ್ ಕಲ್ಯಾಣ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ