ಜೆ.ಸಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣ ದರೋಡೆ

ಬೆಂಗಳೂರು, ನ.2-ನಗರದಲ್ಲಿ ಇತ್ತೀಚೆಗೆ ಮಾರಕಾಸ್ತ್ರಗಳನ್ನು ತೋರಿಸಿ ಹಣ ಹಾಗೂ ಇನ್ನಿತರ ವಸ್ತುಗಳನ್ನು ದುಷ್ಕರ್ಮಿಗಳು ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿನ್ನೆ ಜೆ.ಸಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣ ದರೋಡೆ ಪ್ರಕರಣ ನಡೆದಿದೆ.
ನರೇನ್ ಎಂಬುವರು ಆಸ್ಪತ್ರೆಗೆ ದಾಖಲಾಗಿದ್ದ ಮಗಳನ್ನು ನೋಡುವ ಸಲುವಾಗಿ ಚೆನ್ನೈಗೆ ಹೋಗಲು ನಿನ್ನೆ ಬೆಳಗ್ಗೆ 4 ಗಂಟೆ ಸಮಯದಲ್ಲಿ ಜೆ.ಸಿ.ನಗರದ ಪೆಮ್ಮೇಗೌಡ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು.
ಈ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ನರೇನ್ ಅವರನ್ನು ಅಡ್ಡಗಟ್ಟಿ ಡ್ರ್ಯಾಗರ್ ತೋರಿಸಿ ಬೆದರಿಸಿ ಅವರ ಬಳಿ ಇದ್ದ 2 ಸಾವಿರ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.
ನಗರದಲ್ಲಿ ಆಗಿಂದಾಗ್ಗೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇದ್ದು, ಗಸ್ತು ಹೆಚ್ಚಿಸುವ ಮೂಲಕ ಪೆÇಲೀಸರು ದರೋಡೆಕೋರರನ್ನು ಮಟ್ಟ ಹಾಕಬೇಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ