ಕಸ ಗುಡಿಸುತ್ತಿದ್ದ ವ್ಯಕ್ತಿಯ ಸರಕದ್ದು ಪರಾರಿ

ಬೆಂಗಳೂರು, ನ.2-ಮನೆ ಮುಂದೆ ಕಸ ಗುಡಿಸುತ್ತಿದ್ದ ವ್ಯಕ್ತಿಯ ಹಿಂದಿನಿಂದ ಬಂದ ಸರಗಳ್ಳ ಅವರ 30 ಗ್ರಾಂ ಸರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಾಯತ್ರಿನಗರದ ನಿವಾಸಿ ಉಮಾಪತಿ ಎಂಬುವರು ಬೆಳಗ್ಗೆ 5.45ರಲ್ಲಿ ಮನೆ ಮುಂದೆ ಕಸ ಗುಡಿಸುತ್ತಿದ್ದರು. ಈ ವೇಳೆ ಇವರ ಹಿಂದಿನಿಂದ ಬಂದ ಸರಗಳ್ಳ ಅವರ ಕೊರಳಲ್ಲಿದ್ದ 30 ಗ್ರಾಂ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಉಮಾಪತಿಯವರು ಸಹಾಯಕ್ಕಾಗಿ ಕೂಗಿಕೊಂಡರಾದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ