ನಟ ದುನಿಯಾ ವಿಜಯ್ ಸೇರಿ 7 ಮಂದಿಗೆ ನೋಟಿಸ್

ಬೆಂಗಳೂರು, ನ.3-ಶಾಂತಿ ಮತ್ತು ಸುವ್ಯವಸ್ಥೆ ಹದಗೆಡಿಸಿದ ಆರೋಪದ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಯ್ ಸೇರಿ 7 ಮಂದಿಗೆ ಗಿರಿನಗರ ಠಾಣೆ ಪೆÇಲೀಸರು ನೋಟಿಸ್ ನೀಡಿದ್ದಾರೆ.

ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರ ಎದುರು ಹಾಜರಾಗುವಂತೆ ದುನಿಯಾ ವಿಜಯ್ ಸೇರಿ 7 ಮಂದಿಗೆ ನೋಟಿಸ್ ನೀಡಲಾಗಿದೆ.
ಶಾಂತಿ, ಕಾನೂನು ಸುವ್ಯವಸ್ಥೆ ಹದಗೆಡಿಸಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗಿರಿನಗರ ಪೆÇಲೀಸರು ನೋಟಿಸ್ ಜಾರಿ ಮಾಡಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಸೇರಿ 7 ಮಂದಿ ಸೋಮವಾರ ಡಿಸಿಪಿ ಅಣ್ಣಾಮಲೈ ಅವರ ಎದುರು ಹಾಜರಾಗುವ ಸಾಧ್ಯತೆ ಇದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ