ಆರ್ ಬಿಐ-ಕೇದ್ರದ ಮುಂದುವರೆದ ನಡುವುನ ತಿಕ್ಕಾಟ: ಕೇಂದ್ರಕ್ಕೆ ಸಾರ್ವಜನಿಕ ಹಿತಾಸಕ್ತಿ ಕುರಿತು ಪಾಠ ಮಾಡಿದ ಆರ್ ಬಿಐ

ನವದೆಹಲಿ: ಕೇಂದ್ರ ಸರ್ಕಾರ-ಆರ್ ಬಿಐ ನಡುವಿನ ಸಮರ ಮುಂದುವರೆದಿದ್ದು, ನಿರ್ದೇಶನ ನೀಡಲು ಮುಂದಾಗಿದ್ದ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ಮತ್ತೆ ಪಾಠ ಮಾಡಿದೆ.

ಸಾರ್ವಜನಿಕ ಹಿತಾಸಕ್ತಿಎಂದರೇನು ಎಂಬುದನ್ನು ವ್ಯಾಖ್ಯಾನಿಸಿರುವ ಆರ್ ಬಿಐ, ಕೇಂದ್ರ ಸರ್ಕಾರಕ್ಕೆ ಮನಮುಟ್ಟುವ ಪಾಠ ಮಾದಿದೆ. ಠೇವಣಿದಾರರು, ತೆರಿಗೆದಾರರನ್ನು ರಕ್ಷಿಸುವುದೇ ಸಾರ್ವಜನಿಕ ಹಿತಾಸಕ್ತಿ. ಆರ್ ಬಿಐ ನ ಉಪ ಗೌರ್ನರ್ ಎನ್ಎಸ್ ವಿಶ್ವನಾಥನ್ ಈ ಬಗ್ಗೆ ಮಾತನಾಡಿದ್ದು, ಸಾಲ ವಾಪಸ್ ಪಡೆಯುವುದಕ್ಕೆ ಬ್ಯಾಂಕ್ ಗಳು ಮುಂದಾಗಿವೆ ಎಂದರೆ ಅದು ಬ್ಯಾಂಕ್ ಗಳು ಠೇವಣಿದಾರರು ಹಾಗೂ ತೆರಿಗೆದಾರರ ಹಣ ವಾಪಸ್ ಪಡೆಯುವುದಕ್ಕೆ ಯತ್ನಿಸುತ್ತಿದೆ ಎಂಬುದು ಅದಕ್ಕೆ ಅರ್ಥ. ಹಾಗೆಂದ ಮಾತ್ರಕ್ಕೆ ಅದನ್ನು ನಿರ್ದಯ ಕೇಂದ್ರೀಯ ಬ್ಯಾಂಕ್-ನಿಸ್ಸಹಾಯಕ ಸಾಲಗಾರ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

2,000 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಸುಸ್ತಿದಾರರಾಗುವ ಹಂತ ತಲುಪಿರುವವರಿಂದ ಸಾಲ ವಾಪಸ್ ಪಡೆಯುವ ಪ್ರಕ್ರಿಯೆ ಪ್ರಾರಂಭಿಸಲು ಆರ್ ಬಿಐ ಕ್ರಮ ಕೈಗೊಂಡಿತ್ತು. ಆದರೆ ಈ ಬಗ್ಗೆ ಆರ್ ಬಿಐ ಗೆ ನಿರ್ದೇಶನ ನೀಡಲು ಮುಂದಾಗಿದ್ದ ಕೇಂದ್ರ ಸರ್ಕಾರ, ಸಾಲ ಪಡೆದಿರುವ ಬೇರೆ ಕ್ಷೇತ್ರಗಳ ಉದ್ಯಮಿಗಳಿಗಿಂತ ವಿದ್ಯುತ್ ಉತ್ಪಾದಕರ ಕ್ಷೇತ್ರ ಭಿನ್ನವಾದದ್ದು, ವಿದ್ಯುತ್ ಉತ್ಪಾದಕ ಕ್ಷೇತ್ರದಲ್ಲಿರುವವರು ಸುಸ್ತಿದಾರರಾಗುವುದಕ್ಕೆ ಪ್ರಮೋಟರ್ ಗಳ ನಿಯಂತ್ರಣವನ್ನೂ ಮೀರಿ ಹಲವು ಅಂಶಗಳಿರುತ್ತವೆ. ಆದ್ದರಿಂದ ಕೆಲವು ವಿನಾಯಿತಿ ನೀಡಬೇಕೆಂದು ಆರ್ ಬಿಐ ಗೆ ನಿರ್ದೇಶನ ನೀಡಲು ಕೇಂದ್ರ ಸರ್ಕಾರ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಆರ್ ಬಿಐ- ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರಿತ್ತು.

RBI, Public interest, taxpayers, central gvot

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ