ನಟ ಅರ್ಜುನ್ ಸರ್ಜಾ ಗೆ ನೋಟಿಸ್ ಜಾರಿ

ಬೆಂಗಳೂರು, ನ.4-ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೆÇಲೀಸರು ಅರ್ಜುನ್ ಸರ್ಜಾಗೆ ನೋಟಿಸ್ ಜಾರಿ ಮಾಡಿದ್ದಾರೆ.
ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ಸೂಚಿಸಲಾಗಿದೆ. ನಾಳೆ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ನಟ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಶೃತಿ ಹರಿಹರನ್ ಮೀ ಟೂ ಅಭಿಯಾನದಲ್ಲಿ ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಕಬ್ಬನ್ ಪಾರ್ಕ್ ಪೆÇಲೀಸರಿಗೆ ದೂರು ಕೂಡ ದಾಖಲಿಸಿದ್ದರು. ಶೃತಿ ದೂರಿನಂತೆ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.
ಈಗಾಗಲೇ ದೂರು ಸಂಬಂಧ ಪೆÇಲೀಸರು ಕೃತ್ಯ ನಡೆದ ಮೂರು ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದರು. ಶೃತಿ ಹರಿಹರನ್ ದೂರಿನಲ್ಲಿ ಪ್ರಸ್ತಾಪಿಸಿದ್ದ ಐವರು ಸಾಕ್ಷಿಗಳ ಹೇಳಿಕೆಯನ್ನು ಕೂಡ ಪೆÇಲೀಸರು ಪಡೆದುಕೊಂಡಿದ್ದಾರೆ. ವಿಸ್ಮಯ ಚಿತ್ರದ ನಿರ್ದೇಶಕ ಅರುಣ್ ವೈದ್ಯನಾಥನ್, ನಿರ್ಮಾಪಕ ಉಮೇಶ್, ಮೇಕಪ್ ಮ್ಯಾನ್ ಕಿರಣ್, ಸಹ ನಿರ್ದೇಶಕಿ ಮೋನಿಕಾ ಹಾಗೂ ಶೃತಿ ಸಹಾಯಕ ಬೋರೆಗೌಡ ಹೇಳಿಕೆಯನ್ನು ಪೆÇಲೀಸರು ದಾಖಲಿಸಿಕೊಂಡಿದ್ದಾರೆ. ಇದೀಗ ತನಿಖೆ ಮುಂದುವರಿಸಿರುವ ಪೆÇಲೀಸರು ಅರ್ಜುನ್ ಸರ್ಜಾಗೆ ನೋಟಿಸ್ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ