ಜನಾರ್ಧನ ರೆಡ್ದಿಗೂ ನಮಗೂ ಸಂಬಂಧವೇ ಇಲ್ಲ ಎಂದ ಬಿಜೆಪಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಆಂಬಿಡೆಂಟ್ ಚಿಟ್ ಫಂಡ್ ಗಿನ ಡೀಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೇನೂ ಗೊತ್ತಿಲ್ಲ, ಅವರಿಗೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ಹೇಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ನಮ್ಮ ಪಕ್ಷದಲ್ಲಿ ಈಗ ಇಲ್ಲ. ಹಾಗಾಗಿ ನಮಗೂ, ಅವರಿಗೂ ಸಂಬಂಧ ಇಲ್ಲ. ಈ ಬಗ್ಗೆ ತನಿಖೆ ಆಗಲಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಪ್ರಕರಣದ ಬಗ್ಗೆಯೇ ನಮಗೆ ಮಾಹಿತಿ ಇಲ್ಲ. ಮಾಧ್ಯಮದಲ್ಲಿ ನೋಡಿದಾಗಲೇ ಪ್ರಕರಣ ಕುರಿತಂತೆ ಗೊತ್ತಾಗಿದೆ ಎಂದರು.

ಇನ್ನು ಜನಾರ್ದನ ರೆಡ್ಡಿ ಡೀಲ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ಪರಿಷತ್ ಸದಸ್ಯ ರವಿಕುಮಾರ್, ರೆಡ್ಡಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ, ಪಕ್ಷದಲ್ಲಿ ಜನಾರ್ದನ ರೆಡ್ಡಿಗೆ ಯಾವುದೇ ಜವಾಬ್ದಾರಿ ನೀಡಿಲ್ಲ ಎಂದರು.

ಇನ್ನು ಸಿಸಿಬಿ ದಾಳಿ ಬಳಿಕ ಶಾಸಕ ಶ್ರೀರಾಮುಲು, ರೆಡ್ಡಿ‌ ಮನೆಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ರವಿಕುಮಾರ್, ರೆಡ್ಡಿ ಹಾಗೂ ರಾಮುಲು ಮಧ್ಯೆ ವೈಯಕ್ತಿಕ ಸ್ನೇಹ ಸಂಬಂಧ ಇರಬಹುದು, ಸ್ನೇಹ ಸಂಬಂಧದಿಂದ ಶ್ರೀರಾಮುಲು, ಜನಾರ್ದನ ರೆಡ್ಡಿ ಮನೆಗೆ ಹೋಗಿರಬಹುದು ಎಂದು ತಿಳಿಸಿದ್ದಾರೆ.

Janardhana Reddy,CCB raid,BJP,B S Yedyurappa,Ravikumar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ