ಸುಪ್ರೀಂ ಆದೇಶ ಪಾಲಿಸದ ಜನತೆ… ದೆಹಲಿಯಲ್ಲಿ ತೀವ್ರ ಹದಗೆಟ್ಟ ವಾತಾವರಣ

ನವದೆಹಲಿ: ಸುಪ್ರೀಂಕೋರ್ಟಿನ ಆದೇಶವನ್ನು ಉಲ್ಲಂಘಿಸಿ ಎರಡೂ ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿದ ಪರಿಣಾಮ ಗುರುವಾರ ಮುಂಜಾನೆ ದೆಹಲಿಯ ವಾತಾವರಣ ಸಂಪೂರ್ಣ ಹದಗೆಟ್ಟಿದೆ.

ಕಳೆದೊಂದು ವಾರದಿಂದ ಗಾಳಿಯ ಗುಣಮಟ್ಟ ದಿನೇ ದಿನೇ ಕುಸಿತವಾಗುತ್ತಿದ್ದು, ಗುರುವಾರ ಈ ಪ್ರಮಾಣ ಮತ್ತಷ್ಟು ಕೆಳಮಟ್ಟಕ್ಕೆ ಇಳಿದಿದೆ. ಸರ್ವೋಚ್ಛ ನ್ಯಾಯಾಲಯ ಪಟಾಕಿ ಸಿಡಿಸುವ ಕುರಿತು ನಿರ್ಬಂಧ ಹೇರಿದ್ದು, ರಾತ್ರಿ ಎಂಟರಿಂದ ಹತ್ತರವರೆಗೆ ಮಾತ್ರ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ದೆಹಲಿಯ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಈ ಆದೇಶವನ್ನು ನೀಡಲಾಗಿತ್ತು.

ಆದರೆ ಹಬ್ಬದ ಸಂಭ್ರಮದಲ್ಲಿ ದೆಹಲಿ ಜನತೆ ಸುಪ್ರೀಂ ಆದೇಶವನ್ನು ಗಾಳಿಗೆ ತೂರಿದ್ದು, ರಾತ್ರಿ ಹತ್ತರ ಬಳಿಕವೂ ಪಟಾಕಿ ಸಿಡಿಸುತ್ತಾ ಸಂಭ್ರಮಾಚಾರಣೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ