ಬಯಲಿನಲ್ಲಿ ಮಲ ವಿಸರ್ಜನೆ ಮಾಡಿದ ಕರಣಕ್ಕೆ ವ್ಯಕ್ತಿಯನ್ನು ಉಸಿರು ಗಟ್ಟಿಸಿ ಕೊಂದ ಜನರು

ರಾಂಚಿ, ನ.10- ಬಯಲಿನಲ್ಲಿ ಮಲ ವಿಸರ್ಜನೆ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಉಸಿರು ಗಟ್ಟಿಸಿ ಕೊಂದಿರುವ ಆಘಾತಕಾರಿ ಘಟನೆ ಜಾರ್ಖಂಡ್‍ನ ಸುಕ್ರಾ ಬರ್ಜಾನ ಪಲಮು ಜಿಲ್ಲೆಯಲ್ಲಿ ನಡೆದಿದೆ.

ತಮ್ಮ ಜಮೀನಿನಲ್ಲಿ 45 ವರ್ಷದ ವ್ಯಕ್ತಿಯೊಬ್ಬ ಮಲ ವಿಸರ್ಜನೆ ಮಾಡಿದ್ದನ್ನು ನೋಡಿದ ಆರೋಪಿಗಳು ಆತನನ್ನು ಕೊಲೆ ಮಾಡಿದ್ದಾರೆ ಎಂದು ತನಿಖೆ ನಡೆಸಿರುವ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ,

ಇದೇ ವಿಷಯವಾಗಿ ಈ ಹಿಂದೆಯೂ ಜಗಳ ನಡೆದಿತ್ತು ಎನ್ನಲಾಗಿದೆ. ಇಬ್ಬರು ಕುಟುಂಬಗಳು ಸಂಬಂಧಿಕರಾಗಿದ್ದು, ಜಮೀನು ವಿವಾದ ಸಂಬಂಧ ಮನಸ್ತಾಪ ಮೂಡಿತ್ತು. ಮೃತ ವ್ಯಕ್ತಿ ಆರೋಪಿಗಳ ಜಮೀನಲ್ಲಿ ಶೌಚ ಮಾಡುತ್ತಿದ್ದನ್ನು ಕಂಡು ಆತನನ್ನು ಕೊಂದಿದ್ದಾರೆ ಎಂದು ಪೆÇಲೀಸರು ಹೇಳಿದ್ದಾರೆ.
ಈ ಸಂಬಂಧ ಮಹೇಂದ್ರ ಮತ್ತು ಚೋಟುಕುಮಾರ್ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಕರಣದ ಮತ್ತೊಬ್ಬ ಮಹಿಳಾ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ವ್ಯಕ್ತಿಯ ಪುತ್ರನ ಆಧಾರದ ಮೇಲೆ ಎಫ್‍ಐಆರ್ ದಾಖಲಾಗಿದ್ದು, ಇಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ