ನಾಲ್ಕು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡÀ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Deve Gowda

ಬೆಂಗಳೂರು, ನ.11- ಬಹರೇನ್‍ನ ರಾಜಧಾನಿಯಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿನಿಂದ ನಾಲ್ಕು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದರು.
ನ.13ರಂದು ಬೆಳಗ್ಗೆ ಬಹರೇನ್‍ನ ಮನಮಾನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಗೌಡರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಲ್ಲಿನ ಕನ್ನಡ ಸಂಘ ಭವನವನ್ನು ನಿರ್ಮಾಣ ಮಾಡುತ್ತಿದೆ.
ಬಹರೇನ್ ಕನ್ನಡ ಸಂಘದ ಅಧ್ಯಕ್ಷ ಡಾ.ಭಾರತಿ ಕೃಷ್ಣ ಅವರು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದುಬೈ ಪ್ರವಾಸ ಮುಗಿಸಿ ಗೌಡರು ನ.15ರಂದು ಬೆಳಗ್ಗೆ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ. ಇತ್ತಿಚೆಗಷ್ಟೇ ದೇವೇಗೌಡರು ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ