ನಾಳೆ ಬೆಂಗಳೂರಿಗೆ ಮರಳಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.11- ಕಳೆದ ಮೂರು ದಿನಗಳಿಂದ ಮೈಸೂರು ಜಿಲ್ಲೆಯ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಬೆಂಗಳೂರಿಗೆ ಮರಳಲಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಕುಟುಂಬ ಸದಸ್ಯರೊಂದಿಗೆ ಸಿಎಂ ಕಳೆದ ಮೂರು ದಿನಗಳಿಂದಲೂ ವಿಶ್ರಾಂತಿ ಪಡೆಯುತ್ತಿದ್ದಾರೆ.
ಉಪ ಚುನಾವಣೆ ಪ್ರಚಾರದ ನಂತರ ವಿಶ್ರಾಂತಿ ಪಡೆಯುವಂತೆ ಮುಖ್ಯಮಂತ್ರಿಗೆ ವೈದ್ಯರು ಸಲಹೆ ಮಾಡಿದ್ದ ಹಿನ್ನೆಲೆಯಲ್ಲಿ ಸರ್ಕಾರದ ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಸಿಎಂ ವಿಶ್ರಾಂತಿ ಪಡೆಯುತ್ತಿದ್ದಾರೆ.

ಕುಮಾರಸ್ವಾಮಿ ಅವರೊಂದಿಗೆ ಶಾಸಕಿ ಹಾಗೂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಜತೆಯಲ್ಲಿದ್ದಾರೆ.
ಇಂದು ಬೆಳಗ್ಗೆ ವೈದ್ಯರು ರೆಸಾರ್ಟ್‍ನಲ್ಲಿ ಕುಮಾರಸ್ವಾಮಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ