ಈಶ್ವರಪ್ಪ ಒಬ್ಬ ಮಹಾನ್ ಪೆದ್ದ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.11- ಅಹಿಂದ ನಾಯಕ ಎಂದು ಯಾವುದಾದರೂ ಯೂನಿವರ್ಸಿಟಿ ಸರ್ಟಿಫಿಕೆಟ್ ಕೊಟ್ಟಿದೆಯೇನ್ರಿ, ನಾವೇನು ಹಾಗೆಂದು ಘೋಷಿಸಿಕೊಂಡಿದ್ದೇವೆಯೇ ಎಂದು ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರಪ್ಪ ಒಬ್ಬ ಮಹಾನ್ ಪೆದ್ದ ಎಂದು ಛೇಡಿಸಿದ್ದಾರೆ.
ಸಿದ್ದರಾಮಯ್ಯ ಸ್ವಯಂಘೋಷಿತ ಅಹಿಂದ ನಾಯಕ ಎಂದು ಈಶ್ವರಪ್ಪ ಹೇಳಿಕೆಗೆ ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಶ್ವರಪ್ಪನ ತಲೆಯಲ್ಲಿ ಮೆದುಳೇ ಇಲ್ಲ, ಆತನೊಬ್ಬ ಪೆದ್ದ. ನಾನು ಅಹಿಂದ ನಾಯಕ ಎಂದು ಸರ್ಟಿಫಿಕೆಟ್ ಪಡೆದಿದೇನೆಯೇ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಮಾಡುತ್ತೀರ ಎಂಬ ಪ್ರಶ್ನೆಗೆ ಹೈಕಮಾಂಡ್ ಜತೆ ಚರ್ಚಿಸುವುದಾಗಿ ಹೇಳಿ ಸಿದ್ದರಾಮಯ್ಯ ಜಾರಿಕೊಂಡರು. ಕೆಲವೊಂದು ಸಂದರ್ಭಗಳಲ್ಲಿ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹಾಗೆಂದು ಕೋಮುವಾದಿಗಳೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ಜಾತ್ಯತೀತ ಶಕ್ತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ