2002ರ ಗುಜರಾತ್​ ಹತ್ಯಾಕಾಂಡ: ಮೋದಿ ಕ್ಲೀನ್​ ಚಿಟ್​​ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ನ.19ಕ್ಕೆ ವಿಚಾರಣೆ: ಸುಪ್ರೀಂ

ನವದೆಹಲಿ: 2002ರ ಗುಜರಾತ್​ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ದಳ ನೀಡಿರುವ ಕ್ಲೀನ್​ ಚಿಟ್​​ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ನ.19ರಂದು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್​ ತಿಳಿಸಿದೆ.

ಗುಜರಾತ್​ ಗಲಭೆಯ ಭಾಗವಾಗಿದ್ದ ಗುಲ್ಬರ್ಗ್​ ಸೊಸೈಟಿ ಹತ್ಯಾಕಾಂಡದಲ್ಲಿ ಕಾಂಗ್ರೆಸ್​ನ ಮಾಜಿ ಸಂಸದ ಇಶಾನ್​ ಜೆಫ್ರಿ ಅವರೂ ಸೇರಿದಂತೆ ಒಟ್ಟು 69 ಮಂದಿ ಮೃತಪಟ್ಟಿದ್ದರು. 2002ರ ಫೆ.28ರಂದು ನಡೆದ ಈ ಹತ್ಯಾಕಾಂಡದ ಹಿಂದೆ ಗುಜರಾತ್​ ನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಕೈವಾಡ ಅಡಗಿದೆ ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಎಸ್​ಐಟಿ ನರೇಂದ್ರ ಮೋದಿ ಅವರಿಗೆ ಕ್ಲೀನ್​ ಚಿಟ್​ ನೀಡಿತ್ತು. ಇದನ್ನು ಪ್ರಶ್ನಿಸಿದ್ದ ಮೃತ ಇಶಾನ್​ ಜೆಫ್ರಿ ಪತ್ನಿ ಜಾಕಿಯಾ ಜೆಫ್ರಿ ಅಹಮದಾಬಾದ್​ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್​ ಎಸ್​ಐಟಿ ನೀಡಿದ ವರದಿಯನ್ನೇ ಎತ್ತಿಹಿಡಿದಿತ್ತು. ಇದರಿಂದ ಜಾಕಿಯಾ ಜೆಫ್ರಿ ಅವರು, ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು.

ಈಗ ಜೆಫ್ರಿ ಅವರ ಅರ್ಜಿಯನ್ನು ಮಾನ್ಯ ಮಾಡಿರುವ ಸುಪ್ರೀಂ ಕೋರ್ಟ್​ ನ. 19ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

2002 Gujarat riots, Narendra Modi,Supreme Court, hear on 19th November,Zakia Jafri,

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ