ನ.15ರಂದು ಬೀದರ್‍ನಲ್ಲಿ ರೈತರೊಂದಿಗೆ ಸಿಎಂ ಕುಮಾರಸ್ವಾಮಿ ಸಂವಾದ

ಬೆಂಗಳೂರು, ನ.13- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನ.15ರಂದು ಸಂಜೆ ಬೀದರ್‍ನಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.
ರೈತ ಸ್ಪಂದನ ಹೆಸರಿನಲ್ಲಿ ರೈತರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸುವ ಕಾರ್ಯಕ್ರಮವನ್ನು ಬೀದರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ರೈತರೊಂದಿಗೆ ಸಂವಾದ ನಡೆಸುವ ಮುನ್ನ ಬೀದರ್ ತಾಲೂಕಿನ ಚಿಟ್ಟ ಗ್ರಾಮದ ಪ್ರಗತಿಪರ ರೈತರ ಕ್ಷೇತ್ರಕ್ಕೆ ಭೇಟಿ ನೀಡಿಮುಖ್ಯಮಂತ್ರಿ ಪರಿಶೀಲನೆ ನಡೆಸಲಿದ್ದಾರೆ.

ನ.14ರಂದೇ ರೈತ ಸ್ಪಂದನ ಕಾರ್ಯಕ್ರಮ ನಡೆಸಲು ನಿಗದಿಯಾಗಿತ್ತು. ಆದರೆ, ನಿನ್ನೆ ಕೇಂದ್ರ ಸಚಿವ ಅನಂತ್‍ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆವರೆಗೂ ಶೋಕಾಚರಣೆ ಘೋಷಿಸಿದೆ. ಹೀಗಾಗಿ ನ.15ರಂದು ಈ ಕಾರ್ಯಕ್ರಮ ನಡೆಯುತ್ತಿದೆ.
ಅದೇ ರೀತಿ ಬೀದರ್‍ನಲ್ಲಿ 65ನೆ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಕೂಡ ನಾಳೆಯ ಬದಲಾಗಿ ನ.15ರಂದು ನಡೆಯಲಿದ್ದು, ರೈತ ಸಂವಾದ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಹಕಾರ ಸಪ್ತಾಹ ಉದ್ಘಾಟಿಸಿ ಸಾಧಕರಿಗೆ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ