ರಾಮಮಂದಿರ ನಿರ್ಮಾಣಕ್ಕೆ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯದ ನಾಲ್ಕು ಕಡೆ ಬೃಹತ್ ಸಮಾವೇಶಕ್ಕೆ ಮುಂದಾದ ಸಂಘ ಪರಿವಾರ

ಬೆಂಗಳೂರು, ನ.13-ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಕರಾವಳಿ ಸೇರಿದಂತೆ ರಾಜ್ಯದ ನಾಲ್ಕು ಕಡೆ ಬೃಹತ್ ಸಮಾವೇಶಗಳನ್ನು ನಡೆಸಲು ಸಂಘ ಪರಿವಾರ ಮುಂದಾಗಿದೆ.

ವಿಶ್ವ ಹಿಂದೂ ಪರಿಷತ್‍ನ ರಾಜ್ಯಾಧ್ಯಕ್ಷ ಎಂ.ಬಿ.ಪುರಾಣಿಕ್ ರಾಮಮಂದಿರ ನಿರ್ಮಾಣದ ಬೇಡಿಕೆ ಮುಂದಿಟ್ಟುಕೊಂಡು ಕರಾವಳಿಯಲ್ಲಿ ಮೊದಲ ಹಂತದಲ್ಲಿ ಸಮಾವೇಶಗಳನ್ನು ಆಯೋಜಿಸಿರುವುದಾಗಿ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ ನ.18ರಂದು, ಮಂಗಳೂರಿನಲ್ಲಿ ನ.25 ರಂದು , ಕೊಡಗಿನಲ್ಲಿ ನ.30ರಂದು, ಉಡುಪಿ ಡಿ.2ರಂದು ಸಮಾವೇಶಗಳನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ದೇಶದ ಸಾಧು-ಸಂತರು ಭಾಗವಹಿಸಲಿದ್ದಾರೆ.
ನಂತರ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ರಾಮಮಂದಿರ ಹೋರಾಟವನ್ನು ತೀವ್ರಗೊಳಿಸಲಾಗುವುದು. ಈ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ