ಉಚಿತ ಹೃದಯ ಸಂಬಂಧಿ , ಇಎನ್‍ಟಿ ಇತರೆ ವೈದ್ಯಕೀಯ ತಪಾಸಣೆ

ಬೆಂಗಳೂರು,ನ.17- 65ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಸದಸ್ಯರು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ಬ್ಯಾಂಕ್ ವತಿಯಿಂದ ಎನ್.ಆರ್.ಕಾಲೋನಿಯ ಬಿಬಿಎಂಪಿ ಆಸ್ಪತ್ರೆ ಆವರಣದಲ್ಲಿ ನಾಳೆ ಉಚಿತ ಹೃದಯ ಸಂಬಂಧಿ , ಇಎನ್‍ಟಿ ಇತರೆ ವೈದ್ಯಕೀಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.

ನಾಳೆ ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಶಿಬಿರ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ರವಿಸುಬ್ರಹ್ಮಣ್ಯ ಮತ್ತು ಸ್ಥಳೀಯ ನಗರಪಾಲಿಕೆ ಸದಸ್ಯ ಬಿ.ಎಸ್.ಸತ್ಯನಾರಾಯಣ ಭಾಗವಹಿಸಲಿದ್ದಾರೆ.

ಸಹಕಾರ ಸಪ್ತಾಹದ ಅಂಗವಾಗಿ ಏರ್ಪಡಿಸಿರುವ ಈ ಶಿಬಿರದಲ್ಲಿ ಸಾರ್ವಜನಿಕರು, ಸದಸ್ಯರು ಮತ್ತು ಗ್ರಾಹಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಲು ಬ್ಯಾಂಕ್‍ನ ಅಧ್ಯಕ್ಷ ಡಾ.ಎಂ.ಆರ್.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ