ಕೋಮು ಸೌಹಾರ್ದತೆಗಾಗಿ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಶಿವಸೇನೆ ಆಗ್ರಹ

ಬೆಂಗಳೂರು, ನ.17- ಕೋಮು ಸೌಹಾರ್ದತೆಗಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಕರ್ನಾಟಕ ರಾಜ್ಯ ಶಿವಸೇನೆ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಅಧ್ಯಕ್ಷ ಎಸ್.ರುಕ್ಮಾಂಗದ, ವಾಟಾಳ್ ನಾಗರಾಜ್ ಅವರು ಟಿಪ್ಪು ಜನ್ಮಸ್ಥಳವಾದ ದೇವನಹಳ್ಳಿಗೆ ತೆರಳಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಟಿಪ್ಪು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಆದ್ದರಿಂದ ಈ ಬಾರಿ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಮನವಿ ಮಾಡಿದರು.

ಕಸಾಪದ ಕೂಗಳತೆ ದೂರದಲ್ಲಿರುವ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಛಲದಂಕಮಲ್ಲ ಖ್ಯಾತಿಯ ವಾಟಾಳ್ ಆಚರಿಸಬೇಕೆಂದು ಅವರು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ