ರೈತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು: ಸಚಿವರ ಭರವಸೆ

ಬೆಂಗಳೂರು, ನ.19- ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ಸಹಕಾರ ಸಚಿವ ರೈತರ ಮನವಿ ಸ್ವೀಕರಿಸಿ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮೊದಲು ರೈತ ಮುಖಂಡ ಚಾಮರಸ ಮಾಲಿ ಪಾಟೀಲ್ ಮಾತನಾಡಿ, ಎರಡು ಹಂತಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭರವಸೆ ನೀಡಿದ್ದರು. ಅದಕ್ಕೆ 15 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ ನಾಲ್ಕೂವರೆ ತಿಂಗಳಾದರೂ ಇದುವರೆಗೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿಯವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ರೈತರ ಬಗ್ಗೆ ಹಗುರವಾಗಿ ನಡೆಸಿಕೊಂಡ ಬಗ್ಗೆ ನಮಗೆ ನೋವಿದೆ. ರೈತ ಮಹಿಳೆಯ ಬಗ್ಗೆ ನೀಡಿರುವ ಹೇಳಿಕೆಗಾಗಿ ಅವರು ಇಡೀ ರಾಜ್ಯದ ರೈತರ ಕ್ಷಮೆಕೋರಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ