ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ರೈತ ಸಮುದಾಯ ತಪ್ಪಾಗಿ ತಿಳಿಯಬಾರದು: ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ನ.19-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ರೈತ ಸಮುದಾಯ ತಪ್ಪಾಗಿ ತಿಳಿಯಬಾರದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಮನಸ್ಸು ಸ್ವಚ್ಛವಾಗಿದೆ. ರೈತರಿಗೆ ಸಹಾಯ ಮಾಡಬೇಕೆಂಬ ಹಂಬಲ ಅವರಿಗಿದೆ ಎಂದರು.
ರೈತರ ಕಬ್ಬಿನ ಬಾಕಿ ಪಾವತಿ ಕುರಿತಂತೆ ಮುಖ್ಯಮಂತ್ರಿ ಸಭೆ ನಡೆಸಲಿದ್ದು, ಎಲ್ಲ ರೈತರು ಸಹಕರಿಸಬೇಕು. ಮುಖ್ಯಮಂತ್ರಿಯವರಿಗೆ ರೈತರ ಬಗ್ಗೆ ಇರುವ ಕಾಳಜಿ ಹೊಂದಿರುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ