ರಾಜ್ಯ ಸರ್ಕಾರದಿಂದ ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸೌಲಭ್ಯ ಮತ್ತು ನೆರವು

ಬೆಂಗಳೂರು, ನ.20-ರಾಜ್ಯ ಸರ್ಕಾರ ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸೌಲಭ್ಯ ಹಾಗೂ ನೆರವು ನೀಡಲು ಸಿದ್ಧವಿದೆ. ಈ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಿಸುವ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಕ್ರೀಡಾ ಮತ್ತು ಯುವಜನ ಸಬಲೀಕರಣ ಖಾತೆ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

ಇಂಡೋನೇಷ್ಯಾದಲ್ಲಿ ನಡೆದ ಪ್ಯಾರಾ ಏಷ್ಯನ್ ಗೇಮ್ಸ್‍ನಲ್ಲಿ ಒಂಭತ್ತು ಪದಕಗಳನ್ನು ಪಡೆದ ರಾಜ್ಯದ 7 ಮಂದಿ ವಿಶೇಷ ಚೇತನ ಕ್ರೀಡಾಪಟುಗಳಿಗೆ ತಮ್ಮ ಗೃಹ ಕಚೇರಿಯಲ್ಲಿ ಇಂದು ಸನ್ಮಾನಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ಯಾರಾ ಒಲಂಪಿಕ್ ಸೇರಿದಂತೆ ಎಲ್ಲಾ ಕ್ರೀಡಾಪಟುಗಳಿಗೆ ಸರ್ಕಾರ ಬೆಂಬಲ ನೀಡಲಿದೆ. ಕಳೆದ ವರ್ಷ ಕ್ರೀಡಾ ಸಲಕರಣೆಗಳ ಖರೀದಿಗೆ 4 ಕೋಟಿ ರೂ.ಮಂಜೂರು ಮಾಡಲಾಗಿತ್ತು.ಈ ಹಣ ಸಂಪೂರ್ಣವಾಗಿ ಖರ್ಚು ಮಾಡಲಾಗಿದೆ.ಈ ವರ್ಷವೂ ಸಲಕರಣೆಗಳ ಖರೀದಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಿಸಬೇಕೆಂಬ ಕ್ರೀಡಾಪಟುಗಳ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಕ್ರೀಡಾ ಪೆÇ್ರೀ ಯೋಜನೆಗಳನ್ನು ತಯಾರಿಸುವಾಗ ಈ ಪ್ರಸ್ತಾಪದ ಬಗ್ಗೆ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ 7 ಮಂದಿ ಕ್ರೀಡಾಪಟುಗಳು ದೇಶ ಮತ್ತು ರಾಜ್ಯಕ್ಕೆ ಗೌರವ ತಂದುಕೊಟ್ಟಿದ್ದಾರೆ. ಅದೇ ರೀತಿ ಕ್ರೀಡಾಪಟುಗಳಿಗೆ ಪೆÇ್ರೀ ನೀಡಿ ಪದಕ ಗಳಿಸುವಂತೆ ಮಾಡಿದ ಮಹದೇವ್, ಸತ್ಯನಾರಾಯಣ್, ರವಿಕುಮಾರ್ ಅವರಿಗೂ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ