ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ

ಬೆಂಗಳೂರು, ನ.2- ಪಡೆದ ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಮನನೊಂದ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಟಿಎಂ ಲೇಔಟ್‍ನ ವಿನೋಬ ನಗರದ 8ನೆ ಕ್ರಾಸ್‍ನ ಶೀಟ್ ಮನೆಯಲ್ಲಿ ವಾಸವಾಗಿದ್ದ ಜುನೈದ್ ಖಾನ್ (38) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ.
ಜುನೈದ್‍ಖಾನ್ ಹಲವರಿಂದ ಸಾಲವಾಗಿ ಹಣ ಪಡೆದುಕೊಂಡಿದ್ದರೆನ್ನಲಾಗಿದ್ದು, ಹಣಕಾಸು ತೊಂದರೆಯಿಂದಾಗಿ ಪಡೆದಿದ್ದ ಸಾಲ ಹಿಂದಿರುಗಿಸಲಾಗದೆ ಮನನೊಂದು ರಾತ್ರಿ ಮನೆಯಲ್ಲಿ ಕಬ್ಬಿಣದ ರಾಡಿಗೆ ವೇಲ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕೆಜಿ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ