ಬಸ್ ನಿಂದ ಬಿದ್ದು ತಲೆಗೆ ಪೆಟ್ಟಾಗಿ ಆಸ್ಪತ್ರೆಯಲ್ಲಿ ಚಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ವಾರಸುದಾರರ ಪತ್ತಗೆ ಸಹಕರಿಸಲು ಮನವಿ

ಬೆಂಗಳೂರು, ನ.22- ಬಸ್‍ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಾರಸುದಾರರ ಪತ್ತೆಗೆ ಸಹಕರಿಸಲು ಕೋರಲಾಗಿದೆ.

ನ.19ರಂದು ರಾತ್ರಿ 8.40ರ ಸಮಯದಲ್ಲಿ ಆರ್‍ಆರ್‍ಎಂಆರ್ ಜಂಕ್ಷನ್, ಮಲ್ಯ ಆಸ್ಪತ್ರೆ ಬಳಿ ಸುಮಾರು 25ರಿಂದ 30 ವರ್ಷದ ವ್ಯಕ್ತಿ ಬಸ್‍ವೊಂದರಿಂದ ರಸ್ತೆ ಮೇಲೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿದೆ.

ಸಾರ್ವಜನಿಕರು ಈ ವ್ಯಕ್ತಿಯನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.ಗಾಯಾಳು ಮಾತನಾಡುವ ಸ್ಥಿತಿಯಲ್ಲಿ ಇರುವುದಿಲ್ಲ.
ಅಪಘಾತ ಮಾಡಿದ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಬಗ್ಗೆ ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳು ವ್ಯಕ್ತಿಯ ವಾರಸುದಾರರು ಕೂಡಲೇ ವಿಲ್ಸನ್ ಗಾರ್ಡನ್ ಸಂಚಾರ ಠಾಣೆ ಪೆÇಲೀಸರಿಗೆ ಅಥವಾ ಕಂಟ್ರೋಲ್ ರೂಂ 100ಕ್ಕೆ ಕರೆ ಮಾಡಲು ಕೋರಲಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ