ಮಂಡ್ಯದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳಿಂದ ‘ಅಂಬಿ’ ಪಾರ್ಥಿವ ಶರೀರದ ದರ್ಶನ

ಮಂಡ್ಯ: ಮಂಡ್ಯದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳಿಂದ ‘ಅಂಬಿ’ ಪಾರ್ಥಿವ ಶರೀರದ ದರ್ಶನ ಪಡೆದರು.

ಮಂಡ್ಯ ಜಿಲ್ಲೆಯಲ್ಲಿ ಹಿರಿಯ ನಟ ಹಾಗೂ ಮಾಜಿ ಸಚಿವರಾದ ಅಂಬರೀಶ್ ಅವರ  ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವುದು ಸರ್ಕಾರಕ್ಕೆ ಸವಾಲಾಗಿತ್ತು. ಹಲವಾರು ಸಮಸ್ಯೆಗಳ ನಡುವೆಯೂ ಅಂತಿಮ ದರ್ಶನ ಸುಸೂತ್ರವಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮಂಡ್ಯ ನಗರದಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಅಂಬರೀಶ್ ಅವರ ಸ್ವಚ್ಚ ಮನಸ್ಸಿನಿಂದ ಅವರ ಅಂತ್ಯ ಕಾಲದಲ್ಲೂ ಸುಗಮವಾದ ರೀತಿ ಕಾರ್ಯ ನಡೆಯುತ್ತಿದೆ‌‌‌. ಎಲ್ಲರೂ ಕೊಟ್ಟ ಸಹಕಾರಕ್ಕೆ ನಾನು ಆಬಾರಿ ಎಂದು ಕೃತಜ್ಞತೆ ಸಲ್ಲಿಸಿದರು.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ರಾಜ್‍ಕುಮಾರ್ ಅವರ ಸಮಾಧಿಯ ಬಳಿ ಅಂಬರೀಶ್ ಅವರ ಅಂತ್ಯ ಸಂಸ್ಕಾರ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದ ಸಿಎಂ, ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರಲೇಬೇಕು ಅನ್ನೋದು ಅವರ ಅಭಿಮಾನಿಗಳು ಬಯಕೆಯಾಗಿತ್ತು‌‌. ಅದರಂತೆ ಸರ್ಕಾರದವತಿಯಿಂದ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು ಎಂದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ