ರೆಬೆಲ್ ಸ್ಟಾರ್ ಅಂಬರೀಶ್ ಅವರ ಚಿತಾಭಸ್ಮವನ್ನು ಪಶ್ಚಿಮ ವಾಹಿನಿ ಮತ್ತು ಗೋಕರ್ಣದಲ್ಲಿ ವಿಸರ್ಜನೆ

ಬೆಂಗಳೂರು,ನ.27- ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್ ಅವರ ಚಿತಾಭಸ್ಮವನ್ನು ಪಶ್ಚಿಮ ವಾಹಿನಿ ಮತ್ತು ಗೋಕರ್ಣದಲ್ಲಿ ವಿಸರ್ಜಿಸಲು ನಾವು ಸ್ನೇಹಿತರು ನಿರ್ಧರಿಸಿದ್ದೇವೆ ಎಂದು ಹಿರಿಯ ನಟ ದೊಡ್ಡಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಹಾಲು-ತುಪ್ಪ ಕಾರ್ಯ ನೆರವೇರಿದ ನಂತರ ಅಂಬರೀಶ್ ಕುಟುಂಬಸ್ಥರು ಶ್ರೀರಂಗಪಟ್ಟಣ ಬಳಿ ಚಿತಾಭಸ್ಮ ವಿಸರ್ಜಿಸಲಿದ್ದಾರೆ ಎಂದು ಹೇಳಿದರು.

ನಾವು ಮತ್ತು ಒಂದಿಷ್ಟು ಜನ ಸ್ನೇಹಿತರು ಸೇರಿ ಪಶ್ಚಿಮವಾಹಿನಿ ಮತ್ತು ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜಿಸಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ