ವಿವಿ ಡ್ಯಾಮ್‍ಗೆ ಹಾರಿ ವ್ಯಕ್ತಿಯಬ್ಬನ ಸಾವು

ಚಿತ್ರದುರ್ಗ, ಡಿ.11-ಮಾನಸಿಕ ಅಸ್ವಸ್ಥತೆಯಿಂದ ನೊಂದಿದ್ದ ವ್ಯಕ್ತಿಯೊಬ್ಬರು ಡ್ಯಾಮ್‍ಗೆ ಹಾರಿ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಿರಿಯೂರು ನಗರದಲ್ಲಿ ಬಾಳೇಹಣ್ಣು ವ್ಯಾಪಾರ ಮಾಡುತ್ತಿದ್ದ ಮೋಹನ್(40) ಮೃತ ವ್ಯಕ್ತಿ.

ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.

ನಿನ್ನೆ ವಿ.ವಿ.ಪುರದಲ್ಲಿರುವ ಸಂಬಂಧಿಕರ ಮನೆಗೆ ಹೋಗಿ ಬರುವುದಾಗಿ ಮೋಹನ್ ಮನೆಯಿಂದ ಹೊರಗೆ ಹೋಗಿದ್ದರು. ಆದರೆ ಸಂಬಂಧಿಕರ ಮನೆಗೆ ಹೋಗದೆ ವಿವಿ ಡ್ಯಾಮ್‍ಗೆ ಹಾರಿ ಸಾವನ್ನಪ್ಪಿದ್ದಾರೆ.

ತಡರಾತ್ರಿಯಾದರೂ ಮೋಹನ್ ಮನೆಗೆ ಬಾರದಿದ್ದಾಗ ಸಂಬಂಧಿಕರನ್ನು ವಿಚಾರಿಸಿದಾಗ ತಮ್ಮ ಮನೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಗಾಬರಿಯಾದ ಮನೆಯವರು ಹುಡುಕಾಟ ನಡೆಸಿದಾಗ ವಿವಿ ಡ್ಯಾಮ್‍ನಲ್ಲಿ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ