ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಗೆ ಕಾಂಗ್ರೆಸಿನಲ್ಲಿ ಜಿಜ್ಞಾಸೆ

ಜೈಪುರ್, ಡಿ.11- ರಾಜಸ್ತಾನದಲ್ಲಿ ಬಿಜೆಪಿ ಭದ್ರಕೋಟೆಯನ್ನು ನುಚ್ಚುನೂರು ಮಾಡಿರುವ ಕಾಂಗ್ರೆಸ್‍ನಲ್ಲೀಗ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಜಿಜ್ಞಾಸೆ ಎದುರಾಗಿದೆ.

ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಮುಖಂಡ ಅಶೋಕ್ ಗೆಲ್ಹೋಟ್ ಮುಖ್ಯಮಂತ್ರಿ ಆಗಬೇಕೆಂಬುದು ಕಾಂಗ್ರೆಸ್ ಹೈಕಮಾಂಡ್‍ನ ಬಯಕೆಯಾಗಿದ್ದರೂ ಯುವ ನಾಯಕ ಸಚಿನ್ ಪೈಲೆಟ್ ಅವರ ಹೆಸರೂ ಕೂಡ ಮುಖ್ಯಮಂತ್ರಿ ಸ್ಪರ್ಧೆಯಲ್ಲಿದೆ.

ರಾಜಸ್ತಾನದಲ್ಲಿ ಕಾಂಗ್ರೆಸ್ ಜಯಭೇರಿ ಮೊಳಗಿಸಿದ ನಂತರ ದೆಹಲಿಯಲ್ಲಿ ಪಕ್ಷದ ವರಿಷ್ಠರು ಸಭೆ ಸೇರಿ ಹೊಸ ಸರ್ಕಾರ ರಚನೆ ಕಸರತ್ತು ಆರಂಭಿಸಿದ್ದಾರೆ. ಮಧ್ಯಾಹ್ನದ ನಂತರ ರಾಜಸ್ತಾನದ ನೂತನ ಮುಖ್ಯಮಂತ್ರಿಯ ಹೆಸರು ಅಂತಿಮಗೊಳ್ಳುವ ನಿರೀಕ್ಷೆ ಇದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ