ಕುಂದು ಕೊರತೆಗಳ ಸಂಬಂಧ, ನಾಳೆ ಬೆಳಿಗ್ಗೆ ನೀರಿನ ಅದಾಲತ್

ಬೆಂಗಳೂರು, ಡಿ.12- ಜಲಮಂಡಲಿಯ ಸಕಾನಿ (ಉತ್ತರ-2) ಮತ್ತು ಸಕಾನಿ (ಈಶಾನ್ಯ-1) ಉಪವಿಭಾಗಗಳಲ್ಲಿ ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು-ಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್‍ಅನ್ನು ನಾಳೆ ಬೆಳಗ್ಗೆ 9.30 ರಿಂದ 11 ಗಂಟೆವರೆಗೆ ನಡೆಸಲಾಗುತ್ತದೆ.

ನಾಳೆ ಸಕಾನಿಅ(ಉತ್ತರ-2) ಉಪವಿಭಾಗ ವ್ಯಾಪ್ತಿಯಯಲಹಂಕ ಓಲ್ಡ್ ಟೌನ್, ಯಲಹಂಕ ನ್ಯೂಟೌನ್ ಸೇವಾ ಠಾಣೆ ವ್ಯಾಪ್ತಿಯ ಕುಂದು-ಕೊರತೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ದೊಡ್ಡಬಳ್ಳಾಪುರ ಮುಖ್ಯರಸ್ತೆ, ಯಲಹಂಕ ನ್ಯೂಟೌನ್ ಇಲ್ಲಿನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಉತ್ತರ-2) ಉಪವಿಭಾಗ ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ದೂ.ಸಂ. ಕಾರ್ಯ ನಿರ್ವಾಹಕ ಅಭಿಯಂತರರು (ಉತ್ತರ): 22945130, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಉತ್ತರ-2) ಉಪವಿಭಾಗ: 28562829.

ಸಕಾನಿಅ(ಈಶಾನ್ಯ-1) ಉಪವಿಭಾಗ ವ್ಯಾಪ್ತಿಯ ಮಲ್ಲೇಶ್ವರಂ, ಶ್ರೀರಾಮಪುರ, ಯಶವಂತಪುರ, ಭಾಷ್ಯಂ ಪಾರ್ಕ್ ಸೇವಾ ಠಾಣೆ ವ್ಯಾಪ್ತಿಯ ಕುಂದು-ಕೊರತೆಗಳಿಗೆ ಸಂಬಂಧಿಸಿದಂತೆ 18ನೆ ಅಡ್ಡರಸ್ತೆ, ಸಿಜೆಎಫ್ ಕಾಂಪೌಂಡ್, ಮಲ್ಲೇಶ್ವರಂ ಇಲ್ಲಿನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಈಶಾನ್ಯ-1) ಕಚೇರಿಯಲ್ಲಿ ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸಲಾಗುತ್ತದೆ.

ಮಾಹಿತಿಗೆ ದೂ.ಸಂ.ಕಾರ್ಯ ನಿರ್ವಾಹಕ ಅಭಿಯಂತರರು (ಈಶಾನ್ಯ) 22945124. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಈಶಾನ್ಯ-1) ಉಪವಿಭಾಗ: 22945131.
ಕುಂದು-ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ದೂ.ಸಂ.22238888, ಸಹಾಯವಾಣಿ 1916 ಹಾಗೂ ವಾಟ್ಸಾಪ್ ಸಂಖ್ಯೆ:8762228888 ಗೆ ಸಂಪರ್ಕಿಸಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ